<p>ಗುವಾಹಟಿ: ಮೇಘಾಲಯವು ಅತಿಕ್ರಮಣ ನಡೆಸಿರುವ ಆರೋಪದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಅಸ್ಸಾಂ ವಿಧಾನಸಭೆಯಲ್ಲಿ ಕಾಂಗ್ರೆಸ್ ಮಂಡಿಸಿದ್ದ ನಿಲುವಳಿ ಸೂಚನೆಯನ್ನು ಸ್ಪೀಕರ್ ತಿರಸ್ಕರಿಸಿದರು. ಈ ಕಾರಣ ವಿರೋಧ ಪಕ್ಷದ ನಾಯಕರು ಸೋಮವಾರ ಸದನದಿಂದ ಹೊರ ನಡೆದರು.</p>.<p>ಅಸ್ಸಾಂ–ಮಿಜೋರಾಂ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ನಿಯೋಗವು ಸಲ್ಲಿಸಿರುವ ವರದಿಯ ಬಗ್ಗೆ ಪ್ರತಿಕ್ರಿಯಿಸಲು ಸರ್ಕಾರ ನಿರಾಕರಿಸಿದೆ. ಈ ಬಗ್ಗೆಯೂ ವಿರೋಧ ಪಕ್ಷಗಳು ಸದನದಲ್ಲಿ ಅಸಮಾಧಾನ ವ್ಯಕ್ತ ಪಡಿಸಿದವು.</p>.<p>‘ಅಲ್ಲದೆ ಅಸ್ಸಾಂ ಮುಖ್ಯಮಂತ್ರಿ ಅವರು ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮೇಘಾಲಯದ ಮುಖ್ಯಮಂತ್ರಿ ಅವರೊಂದಿಗೆ ನಡೆಸಿದ ಚರ್ಚೆ ಬಗ್ಗೆಯೂ ಸದನಕ್ಕೆ ಮಾಹಿತಿ ನೀಡುತ್ತಿಲ್ಲ’ ಎಂದು ವಿರೋಧ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ ಶಾಸಕ ನೂರುಲ್ ಹುದಾ ಅವರು ಪ್ರಶ್ನೋತ್ತರ ಅವಧಿಯ ಕೊನೆಯಲ್ಲಿ ಮೇಘಾಲಯದ ಅತಿಕ್ರಮಣಕ್ಕೆ ಸಂಬಂಧಿಸಿದ ಬಗ್ಗೆ ಚರ್ಚಿಸಲು ಅವಕಾಶ ನೀಡುವಂತೆ ನಿಲುವಳಿಯನ್ನು ಮಂಡಿಸಿದರು.</p>.<p>‘ಮೇಘಾಲಯವು ಅಸ್ಸಾಂನ ಗುವಾಹಟಿಯ ಖಾನಾಪರ ಪ್ರದೇಶದಲ್ಲಿ ಡ್ರೋನ್ ಬಳಸಿ ಗಡಿ ಸಮೀಕ್ಷೆ ನಡೆಸುತ್ತಿದೆ ಎಂಬುದಾಗಿ ಹಲವು ಪತ್ರಿಕಗೆಳು ವರದಿ ಮಾಡಿವೆ’ ಎಂದು ಅವರು ಸದನಕ್ಕೆ ತಿಳಿಸಿದರು.</p>.<p>ಆದರೆ ಸ್ಪೀಕರ್ ಬಿಸ್ವಜಿತ್ ದೈಮರಿ ಅವರು ನೂರುಲ್ ಹುದಾ ಅವರಿಗೆ ನಿಲುವಳಿ ಮಂಡಿಸಲು ಅವಕಾಶ ನೀಡಲು ನಿರಾಕರಿಸಿದರು.</p>.<p>‘ಕಮರುಪ್ನ ಮಹಾನಗರ ಪಾಲಿಕೆಯ ಅಧಿಕಾರಿಗಳ ಅನುಮತಿಯೊಂದಿಗೆ ಮೇಘಾಲಯವು ಸಮೀಕ್ಷೆ ನಡೆಸಿದೆ. ಅಸ್ಸಾಂ ಕೂಡ ಇದೇ ರೀತಿಯ ಸಮೀಕ್ಷೆ ನಡೆಸಲಿದೆ. ಈ ಸಮೀಕ್ಷೆಯಿಂದ ಯಾವುದೇ ಅತಿಕ್ರಮಣ ನಡೆದಿಲ್ಲ ಎಂಬ ವಿಶ್ವಾಸ ನನಗಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಲು ಸರ್ಕಾರ ಸಿದ್ಧವಿದೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಪಿಜುಶ್ ಹಜಾರಿಕಾ ಸದನಕ್ಕೆ ತಿಳಿಸಿದ್ದಾರೆ.</p>.<p>ಈ ಬಳಿಕ ಸ್ಪೀಕರ್ ಅವರು ವಿರೋಧ ಪಕ್ಷದ ನಾಯಕರನ್ನು ಸದನದಲ್ಲಿ ಇರಬೇಕುಎಂದು ಮನವಿ ಮಾಡಿದರು. ಆದರೂ ಕಾಂಗ್ರೆಸ್, ಎಐಯುಡಿಎಫ್, ಸಿಪಿಐ(ಎಂ)ನ ನಾಯಕರು ಮತ್ತು ಸ್ವತಂತ್ರ ಶಾಸಕರೊಬ್ಬರು ಸದನದಿಂದ ಹೊರನಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುವಾಹಟಿ: ಮೇಘಾಲಯವು ಅತಿಕ್ರಮಣ ನಡೆಸಿರುವ ಆರೋಪದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಅಸ್ಸಾಂ ವಿಧಾನಸಭೆಯಲ್ಲಿ ಕಾಂಗ್ರೆಸ್ ಮಂಡಿಸಿದ್ದ ನಿಲುವಳಿ ಸೂಚನೆಯನ್ನು ಸ್ಪೀಕರ್ ತಿರಸ್ಕರಿಸಿದರು. ಈ ಕಾರಣ ವಿರೋಧ ಪಕ್ಷದ ನಾಯಕರು ಸೋಮವಾರ ಸದನದಿಂದ ಹೊರ ನಡೆದರು.</p>.<p>ಅಸ್ಸಾಂ–ಮಿಜೋರಾಂ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ನಿಯೋಗವು ಸಲ್ಲಿಸಿರುವ ವರದಿಯ ಬಗ್ಗೆ ಪ್ರತಿಕ್ರಿಯಿಸಲು ಸರ್ಕಾರ ನಿರಾಕರಿಸಿದೆ. ಈ ಬಗ್ಗೆಯೂ ವಿರೋಧ ಪಕ್ಷಗಳು ಸದನದಲ್ಲಿ ಅಸಮಾಧಾನ ವ್ಯಕ್ತ ಪಡಿಸಿದವು.</p>.<p>‘ಅಲ್ಲದೆ ಅಸ್ಸಾಂ ಮುಖ್ಯಮಂತ್ರಿ ಅವರು ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮೇಘಾಲಯದ ಮುಖ್ಯಮಂತ್ರಿ ಅವರೊಂದಿಗೆ ನಡೆಸಿದ ಚರ್ಚೆ ಬಗ್ಗೆಯೂ ಸದನಕ್ಕೆ ಮಾಹಿತಿ ನೀಡುತ್ತಿಲ್ಲ’ ಎಂದು ವಿರೋಧ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ ಶಾಸಕ ನೂರುಲ್ ಹುದಾ ಅವರು ಪ್ರಶ್ನೋತ್ತರ ಅವಧಿಯ ಕೊನೆಯಲ್ಲಿ ಮೇಘಾಲಯದ ಅತಿಕ್ರಮಣಕ್ಕೆ ಸಂಬಂಧಿಸಿದ ಬಗ್ಗೆ ಚರ್ಚಿಸಲು ಅವಕಾಶ ನೀಡುವಂತೆ ನಿಲುವಳಿಯನ್ನು ಮಂಡಿಸಿದರು.</p>.<p>‘ಮೇಘಾಲಯವು ಅಸ್ಸಾಂನ ಗುವಾಹಟಿಯ ಖಾನಾಪರ ಪ್ರದೇಶದಲ್ಲಿ ಡ್ರೋನ್ ಬಳಸಿ ಗಡಿ ಸಮೀಕ್ಷೆ ನಡೆಸುತ್ತಿದೆ ಎಂಬುದಾಗಿ ಹಲವು ಪತ್ರಿಕಗೆಳು ವರದಿ ಮಾಡಿವೆ’ ಎಂದು ಅವರು ಸದನಕ್ಕೆ ತಿಳಿಸಿದರು.</p>.<p>ಆದರೆ ಸ್ಪೀಕರ್ ಬಿಸ್ವಜಿತ್ ದೈಮರಿ ಅವರು ನೂರುಲ್ ಹುದಾ ಅವರಿಗೆ ನಿಲುವಳಿ ಮಂಡಿಸಲು ಅವಕಾಶ ನೀಡಲು ನಿರಾಕರಿಸಿದರು.</p>.<p>‘ಕಮರುಪ್ನ ಮಹಾನಗರ ಪಾಲಿಕೆಯ ಅಧಿಕಾರಿಗಳ ಅನುಮತಿಯೊಂದಿಗೆ ಮೇಘಾಲಯವು ಸಮೀಕ್ಷೆ ನಡೆಸಿದೆ. ಅಸ್ಸಾಂ ಕೂಡ ಇದೇ ರೀತಿಯ ಸಮೀಕ್ಷೆ ನಡೆಸಲಿದೆ. ಈ ಸಮೀಕ್ಷೆಯಿಂದ ಯಾವುದೇ ಅತಿಕ್ರಮಣ ನಡೆದಿಲ್ಲ ಎಂಬ ವಿಶ್ವಾಸ ನನಗಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಲು ಸರ್ಕಾರ ಸಿದ್ಧವಿದೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಪಿಜುಶ್ ಹಜಾರಿಕಾ ಸದನಕ್ಕೆ ತಿಳಿಸಿದ್ದಾರೆ.</p>.<p>ಈ ಬಳಿಕ ಸ್ಪೀಕರ್ ಅವರು ವಿರೋಧ ಪಕ್ಷದ ನಾಯಕರನ್ನು ಸದನದಲ್ಲಿ ಇರಬೇಕುಎಂದು ಮನವಿ ಮಾಡಿದರು. ಆದರೂ ಕಾಂಗ್ರೆಸ್, ಎಐಯುಡಿಎಫ್, ಸಿಪಿಐ(ಎಂ)ನ ನಾಯಕರು ಮತ್ತು ಸ್ವತಂತ್ರ ಶಾಸಕರೊಬ್ಬರು ಸದನದಿಂದ ಹೊರನಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>