ಕಳೆದ ವರ್ಷ ಜುಲೈ 11ರಂದು ನಡೆದಿದ್ದ ಎಐಎಡಿಎಂಕೆಯ ಸಾಮಾನ್ಯ ಮಂಡಳಿ ಸಭೆಯಲ್ಲಿ ಪಳನಿಸ್ವಾಮಿಯವರನ್ನು ಪಕ್ಷದ ಮಧ್ಯಂತರ ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿತ್ತು. ಈ ಕುರಿತು ಫೆಬ್ರುವರಿ 23ರಂದು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಈ ನೇಮಕಾತಿಯನ್ನು ಊರ್ಜಿತಗೊಳಿಸಿತ್ತು. ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಬೇರೆ ಯಾರೂ ನಾಮಪತ್ರ ಸಲ್ಲಿಸದಿದ್ದರೆ, ಪಳನಿಸ್ವಾಮಿ ಅವರೇ ಅವಿರೋಧವಾಗಿ ಆಯ್ಕೆ ಆಗುತ್ತಾರೆ. ಇದರಿಂದಾಗಿ ಪಕ್ಷದ ಮೇಲಿನ ಅವರ ಹಿಡಿತ ಮತ್ತಷ್ಟು ಬಲವಾಗುತ್ತದೆ ಎನ್ನಲಾಗಿದೆ.