'ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸಭೆ ಅಧಿವೇಶನವನ್ನು ಮೊಟಕುಗೊಳಿಸಿದ್ದೇವೆ. 10ಕ್ಕೂ ಹೆಚ್ಚು ಸಚಿವರು ಮತ್ತು 20ಕ್ಕೂ ಹೆಚ್ಚು ಶಾಸಕರಿಗೆ ಕೋವಿಡ್ ದೃಢಪಟ್ಟಿದೆ. ಪ್ರತಿಯೊಬ್ಬರಿಗೂ ಹೊಸ ವರ್ಷ, ಹುಟ್ಟುಹಬ್ಬ ಮತ್ತು ಇತರೆ ಸಂದರ್ಭಗಳಲ್ಲಿ ಸಂಭ್ರಮಾಚರಿಸಬೇಕೆನ್ನುವ ಹಂಬಲವಿರುತ್ತದೆ. ಆದರೆ ಕೊರೊನಾ ವೈರಸ್ನ ಹೊಸ ರೂಪಾಂತರ (ಓಮೈಕ್ರಾನ್) ವೇಗವಾಗಿ ಹರಡುತ್ತದೆ ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಮತ್ತು ಎಚ್ಚರಿಕೆಯಿಂದಿರಬೇಕು. ಈ ಬಗ್ಗೆ ಪ್ರಧಾನಿ ಮೋದಿ ಮನವಿ ಮಾಡಿದ್ದು, ಈಗಾಗಲೇ ಕೆಲವು ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಮಹಾರಾಷ್ಟ್ರದ ಮುಂಬೈ ಮತ್ತು ಪುಣೆಯಲ್ಲಿ ಪ್ರಕರಣಗಳು ಹೆಚ್ಚಾಗುತ್ತಿವೆ' ಎಂದು ಸುದ್ದಿಗಾರರಿಗೆ ತಿಳಿಸಿದರು.