ಡೆಹ್ರಾಡೂನ್: ಕುಂಭ ಮೇಳ ಉತ್ಸವದಲ್ಲಿ ಪಾಲ್ಗೊಂಡಿದ್ದ ಒಂದು ಸಾವಿರಕ್ಕೂ ಹೆಚ್ಚು ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಬುಧವಾರ ಅಧಿಕಾರಿಗಳು ತಿಳಿಸಿದ್ದಾರೆ.
ಲಕ್ಷಾಂತರ ಜನರು ಮಾಸ್ಕ್ ಧರಿಸದೆ, ಅಂತರವಿಲ್ಲದೆ, ಒಟ್ಟಿಗೆ ನದಿಯಲ್ಲಿ ಸ್ನಾನ ಮಾಡಿರುವುದು ಹಾಗೂ ಸಾಲುಗಟ್ಟಿರುವುದು ಸೋಂಕು ಹೆಚ್ಚಾಗಲು ಕಾರಣ ಎಂದು ಹೇಳಲಾಗಿದೆ.
ಕಳೆದ 48 ಗಂಟೆಗಳಲ್ಲಿ ನದಿ ಪಕ್ಕದಲ್ಲಿರುವ ಹರಿದ್ವಾರ ನಗರದಲ್ಲಿ 1 ಸಾವಿರಕ್ಕೂ ಅಧಿಕ ಜನರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದೇಶದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಬೃಹತ್ ಧಾರ್ಮಿಕ ಸಮಾರಂಭ, ಚುನಾವಣಾ ರ್ಯಾಲಿಗಳನ್ನು ನಡೆಸದಂತೆ ಹಾಗೂ ಹೆಚ್ಚು ಜನಸಂದಣಿ ಸೇರಬಾರದು ಎಂದು ತಜ್ಞರು ಈಗಾಗಲೇ ಸೂಚನೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.