<p><strong>ನವದೆಹಲಿ: </strong>ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಪ್ರತಿ ನಾಲ್ಕು ಮಾದರಿ ಪರೀಕ್ಷೆಗಳ ಪೈಕಿ ಒಂದು ಪಾಸಿಟಿವ್ ಫಲಿತಾಂಶ ನೀಡುತ್ತಿದೆ.</p>.<p>ಶನಿವಾರ ಒಂದೇ ದಿನ ಇಲ್ಲಿ 24 ಸಾವಿರ ಪ್ರಕರಣಗಳು ದಾಖಲಾಗಿದ್ದವು. ನಡೆಸಲಾದ ಮಾದರಿ ಪರೀಕ್ಷೆಗಳ ಸಂಖ್ಯೆ 99,230 ಆಗಿತ್ತು. ಇದರಿಂದಾಗಿ ದೆಹಲಿ ಸರ್ಕಾರ ಭಾರಿ ಆತಂಕದಲ್ಲಿದ್ದು, ಇದೊಂದು ಅತ್ಯಂತ ಕಳವಳಕಾರಿ ಬೆಳವಣಿಗೆ ಎಂದು ಮುಖ್ಯಮಂತ್ರಿ ಅರವಿಂಧ ಕೇಜ್ರಿವಾಲ್ ಹೇಳಿದ್ದಾರೆ.</p>.<p>ಶುಕ್ರವಾರ 19,500 ಮಂದಿಗೆ ಕೋವಿಡ್ ದೃಢಪಟ್ಟಿತ್ತು. ಒಂದೇ ದಿನದಲ್ಲಿ ಮತ್ತೆ ಸುಮಾರು 5 ಸಾವಿರದಷ್ಟು ಹೊಸ ಪ್ರಕರಣಗಳು ದಾಖಲಾಗಿರುವುದರಿಂದ ಇಲ್ಲಿ ಆಮ್ಲಜನಕ, ರೆಮ್ಡೆಸಿವಿರ್ ಮತ್ತು ತೊಸಿಲಿಞುಮಾಬ್ ಔಷಧಗಳ ಕೊರತೆ ತೀವ್ರವಾಗಿ ಕಾಡತೊಡಗಿದೆ. ಆಸ್ಪತ್ರೆಗಳೂ ಭರ್ತಿಯಾಗತೊಡಗಿದ್ದು, ಹಾಸಿಗೆಗಳಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಹೇಳಲಾಗುತ್ತಿದೆ.</p>.<p>‘ಕೋವಿಡ್ ಪ್ರಕರಣಗಳ ಸಂಖ್ಯೆ ಇನ್ನಷ್ಟು ಹೆಚ್ಚಳವಾದರೆ ಜನರ ಜೀವ ಉಳಿಸುವುದು ಸರ್ಕಾರದ ಪ್ರಮುಖ ಆದ್ಯತೆ ಆಗಿರಲಿದೆ. ಹೀಗಾಗಿ ಕೈಗೊಳ್ಳುವ ಯಾವುದೇ ಕಠಿಣ ಕ್ರಮಕ್ಕೆ ಜನರು ಸಿದ್ಧರಾಗಿರಬೇಕು’ ಎಂಬ ಸೂಚನೆಯನ್ನು ಕೇಜ್ರಿವಾಲ್ ನೀಡಿದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/india-reports-261500-new-covid19-cases-1501-fatalities-and-138423-discharges-in-the-last-24-hours-as-823315.html" target="_blank">Covid-19 India Update: 2.61 ಲಕ್ಷ ಹೊಸ ಪ್ರಕರಣ, 1,501 ಮಂದಿ ಸಾವು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಪ್ರತಿ ನಾಲ್ಕು ಮಾದರಿ ಪರೀಕ್ಷೆಗಳ ಪೈಕಿ ಒಂದು ಪಾಸಿಟಿವ್ ಫಲಿತಾಂಶ ನೀಡುತ್ತಿದೆ.</p>.<p>ಶನಿವಾರ ಒಂದೇ ದಿನ ಇಲ್ಲಿ 24 ಸಾವಿರ ಪ್ರಕರಣಗಳು ದಾಖಲಾಗಿದ್ದವು. ನಡೆಸಲಾದ ಮಾದರಿ ಪರೀಕ್ಷೆಗಳ ಸಂಖ್ಯೆ 99,230 ಆಗಿತ್ತು. ಇದರಿಂದಾಗಿ ದೆಹಲಿ ಸರ್ಕಾರ ಭಾರಿ ಆತಂಕದಲ್ಲಿದ್ದು, ಇದೊಂದು ಅತ್ಯಂತ ಕಳವಳಕಾರಿ ಬೆಳವಣಿಗೆ ಎಂದು ಮುಖ್ಯಮಂತ್ರಿ ಅರವಿಂಧ ಕೇಜ್ರಿವಾಲ್ ಹೇಳಿದ್ದಾರೆ.</p>.<p>ಶುಕ್ರವಾರ 19,500 ಮಂದಿಗೆ ಕೋವಿಡ್ ದೃಢಪಟ್ಟಿತ್ತು. ಒಂದೇ ದಿನದಲ್ಲಿ ಮತ್ತೆ ಸುಮಾರು 5 ಸಾವಿರದಷ್ಟು ಹೊಸ ಪ್ರಕರಣಗಳು ದಾಖಲಾಗಿರುವುದರಿಂದ ಇಲ್ಲಿ ಆಮ್ಲಜನಕ, ರೆಮ್ಡೆಸಿವಿರ್ ಮತ್ತು ತೊಸಿಲಿಞುಮಾಬ್ ಔಷಧಗಳ ಕೊರತೆ ತೀವ್ರವಾಗಿ ಕಾಡತೊಡಗಿದೆ. ಆಸ್ಪತ್ರೆಗಳೂ ಭರ್ತಿಯಾಗತೊಡಗಿದ್ದು, ಹಾಸಿಗೆಗಳಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಹೇಳಲಾಗುತ್ತಿದೆ.</p>.<p>‘ಕೋವಿಡ್ ಪ್ರಕರಣಗಳ ಸಂಖ್ಯೆ ಇನ್ನಷ್ಟು ಹೆಚ್ಚಳವಾದರೆ ಜನರ ಜೀವ ಉಳಿಸುವುದು ಸರ್ಕಾರದ ಪ್ರಮುಖ ಆದ್ಯತೆ ಆಗಿರಲಿದೆ. ಹೀಗಾಗಿ ಕೈಗೊಳ್ಳುವ ಯಾವುದೇ ಕಠಿಣ ಕ್ರಮಕ್ಕೆ ಜನರು ಸಿದ್ಧರಾಗಿರಬೇಕು’ ಎಂಬ ಸೂಚನೆಯನ್ನು ಕೇಜ್ರಿವಾಲ್ ನೀಡಿದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/india-reports-261500-new-covid19-cases-1501-fatalities-and-138423-discharges-in-the-last-24-hours-as-823315.html" target="_blank">Covid-19 India Update: 2.61 ಲಕ್ಷ ಹೊಸ ಪ್ರಕರಣ, 1,501 ಮಂದಿ ಸಾವು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>