ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀರತ್‌ನಲ್ಲಿ 30ಕ್ಕೂ ಡೆಂಗ್ಯೂ ಪ್ರಕರಣ: ಜ್ವರ ನಿಯಂತ್ರಣಕ್ಕೆ ಆರೋಗ್ಯ ಅಭಿಯಾನ

Last Updated 9 ಸೆಪ್ಟೆಂಬರ್ 2021, 3:43 IST
ಅಕ್ಷರ ಗಾತ್ರ

ಮೀರತ್:‌ ಜಿಲ್ಲೆಯಾದ್ಯಂತ30ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ18 ಮಂದಿ ಗುಣಮುಖರಾಗಿದ್ದಾರೆ ಎಂದು ಮೀರತ್‌ ಜಿಲ್ಲಾಡಳಿತ ತಿಳಿಸಿದೆ.

ʼಜಿಲ್ಲೆಯಲ್ಲಿ ಇದುವರೆಗೆ33 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇನ್ನೂ 15 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣಗಳು ಹೆಚ್ಚಾಗುವುದನ್ನು ತಡೆಯಲು ಅಭಿಯಾನ ಆರಂಭಿಸಿದ್ದೇವೆ. ಪ್ರತಿಯೊಂದು ಮನೆಗೂ ಭೇಟಿ ನೀಡಿ, ಜ್ವರ ಅಥವಾ ತಲೆನೋವು ಕಾಣಿಸಿಕೊಂಡ ಬಗ್ಗೆ ಜನರಿಂದ ಮಾಹಿತಿ ಪಡೆಯುತ್ತಿದ್ದೇವೆ. ಜನರು ಲಸಿಕೆ ಪಡೆದುಕೊಂಡಿದ್ದಾರೆಯೇ ಅಥವಾ ಆಯುಷ್ಮಾನ್‌ ಭಾರತ್‌ ಯೋಜನೆ ವ್ಯಾಪ್ತಿಯಲ್ಲಿದ್ದಾರೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳುತ್ತಿದ್ದೇವೆ. ಒಂದುವೇಳೆಜ್ವರದ ಲಕ್ಷಣ ಇರುವ ಯಾವುದೇ ರೋಗಿ ಕಂಡುಬಂದರೆ ಅವರನ್ನು ಪರೀಕ್ಷೆಗೊಳಪಡಿಸಿ, ಸೂಕ್ತ ಚಿಕಿತ್ಸೆ ನೀಡಲಾಗುವುದುʼ ಎಂದು ಜಿಲ್ಲೆಯ ಮುಖ್ಯ ಆರೋಗ್ಯಾಧಿಕಾರಿ (ಸಿಎಂಒ) ಅಖಿಲೇಶ್‌ ಮೋಹನ್‌ ತಿಳಿಸಿದ್ದಾರೆ.

ಅಭಿಯಾನವು ಸೆಪ್ಟೆಂಬರ್‌7ರಿಂದ ಸೆಪ್ಟೆಂಬರ್‌16ರ ವರೆಗೆ ಮುಂದುವರಿಯಲಿದೆ ಎಂದಿರುವಸಿಎಂಒ,ʼನಮ್ಮ ಸಮುದಾಯ ಆರೋಗ್ಯ ಕೇಂದ್ರಗಳಿಗೆ (ಸಿಎಚ್‌ಸಿ)ವೈದ್ಯರು ಮತ್ತು ಅಗತ್ಯ ಔಷಗಳನ್ನು ಪೂರೈಸಲಾಗಿದೆ. ಯಾವುದೇ ರೋಗಿಯ ಸ್ಥಿತಿ ಗಂಭೀರವಾಗಿದ್ದರೆ ಅವರನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗುವುದುʼ ಎಂದು ಮಾಹಿತಿ ನೀಡಿದ್ದಾರೆ.

ಮುಂದುವರಿದು,ಡೆಂಗ್ಯೂ ಗುಣಲಕ್ಷಣಗಳಿದ್ದರೆ ಜನರು, ವೈದ್ಯರ ಸಲಹೆ ಪಡೆಯದೆಯೇ ಔಷಧ ಪಡೆಯಬಾರದುಎಂದೂ ಮನವಿ ಮಾಡಿದ್ದಾರೆ.

ಡೆಂಗ್ಯೂ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ಸಾಧ್ಯವಿರುವ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಿದೆ ಎಂದು ಉತ್ತರ ಪ್ರದೇಶ ಆರೋಗ್ಯ ಸಚಿವ ಜೈ ಪ್ರತಾಪ್‌ ಸಿಂಗ್‌ ಈಗಾಗಲೇ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT