<p><strong>ಸಿಲ್ಚಾರ್, ಅಸ್ಸಾಂ</strong>: ಕೋವಿಡ್ ತಪಾಸಣೆಗೆ ವಿರೋಧ ವ್ಯಕ್ತಪಡಿಸಿ ಗೊಂದಲ ಮೂಡಿಸಿದ 300 ಜನ ಪ್ರಯಾಣಿಕರು, ಬಳಿಕ ನಿಲ್ದಾಣದಿಂದಲೇ ಪರಾರಿಯಾದ ಘಟನೆ ಇಲ್ಲಿನ ಸಿಲ್ಚಾರ್ ವಿಮಾನನಿಲ್ದಾಣದಲ್ಲಿ ಬುಧವಾರ ನಡೆದಿದೆ. ಈ ಪ್ರಯಾಣಿಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="bodytext">‘ವಿವಿಧ ನಿಲ್ದಾಣಗಳಿಂದ ಸುಮಾರು 690 ಪ್ರಯಾಣಿಕರು ಬಂದಿದ್ದರು. ಇವರು ಸಮೀಪದ ಟಿಕೊಲ್ ಮಾಡೆಲ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಬೇಕಿತ್ತು. ತಪಾಸಣೆಗೆ ₹ 500 ನೀಡಬೇಕು ಎಂದು ತಕರಾರು ತೆಗೆದ 300 ಜನರು ಗೊಂದಲ ಮೂಡಿಸಿ, ಬಳಿಕ ಪರಾರಿಯಾದರು’ ಎಂದು ಕಚಾರ್ನ ಹೆಚ್ಚುವರಿ ಜಿಲ್ಲಾಧಿಕಾರಿ ಸುಮಿತ್ ಸಟ್ಟವನ್ ತಿಳಿಸಿದ್ದಾರೆ.</p>.<p>ಹೊರಗಡೆಯಿಂದ ರಾಜ್ಯಕ್ಕೆ ಬರುವವರಿಗೆ ಕೋವಿಡ್ ಪರೀಕ್ಷೆಯನ್ನು ಅಸ್ಸಾಂ ಸರ್ಕಾರ ಕಡ್ಡಾಯಪಡಿಸಿದೆ. ಉಚಿತವಾಗಿ ಉಚಿತ ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಯನ್ನು ನಡೆಸಲಿದ್ದು, ಬಳಿಕ ರೂ.500 ಪಡೆದು ಆರ್ಟಿ–ಪಿಸಿಆರ್ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕಾಗಿದೆ.</p>.<p>ಪ್ರಯಾಣಿಕರು ನಿಯಮ ಉಲ್ಲಂಘಿಸಿದ್ದಾರೆ. ನಮ್ಮ ಬಳಿ ಪ್ರಯಾಣಿಕರಿಗೆ ಸಂಬಂಧಿಸಿದ ವಿವರಗಳಿವೆ. ಅವರನ್ನು ಗುರುತಿಸಿ ಐಪಿಸಿ ಸೆಕ್ಷನ್ 188ರ ಅನ್ವಯ (ಸೇವೆಗೆ ಅಡ್ಡಿ) ಕ್ರಿಮಿನಲ್ ಮೊಕದ್ದಮೆ ದಾಖಲಿಸುತ್ತೇವೆ. 690 ಪ್ರಯಾಣಿಕರ ಪೈಕಿ 189 ಜನರಿಗೆ ಪರೀಕ್ಷೆ ನಡೆಸಿದ್ದು, 6 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ ಎಂದು ಸುಮಿತ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಲ್ಚಾರ್, ಅಸ್ಸಾಂ</strong>: ಕೋವಿಡ್ ತಪಾಸಣೆಗೆ ವಿರೋಧ ವ್ಯಕ್ತಪಡಿಸಿ ಗೊಂದಲ ಮೂಡಿಸಿದ 300 ಜನ ಪ್ರಯಾಣಿಕರು, ಬಳಿಕ ನಿಲ್ದಾಣದಿಂದಲೇ ಪರಾರಿಯಾದ ಘಟನೆ ಇಲ್ಲಿನ ಸಿಲ್ಚಾರ್ ವಿಮಾನನಿಲ್ದಾಣದಲ್ಲಿ ಬುಧವಾರ ನಡೆದಿದೆ. ಈ ಪ್ರಯಾಣಿಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="bodytext">‘ವಿವಿಧ ನಿಲ್ದಾಣಗಳಿಂದ ಸುಮಾರು 690 ಪ್ರಯಾಣಿಕರು ಬಂದಿದ್ದರು. ಇವರು ಸಮೀಪದ ಟಿಕೊಲ್ ಮಾಡೆಲ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಬೇಕಿತ್ತು. ತಪಾಸಣೆಗೆ ₹ 500 ನೀಡಬೇಕು ಎಂದು ತಕರಾರು ತೆಗೆದ 300 ಜನರು ಗೊಂದಲ ಮೂಡಿಸಿ, ಬಳಿಕ ಪರಾರಿಯಾದರು’ ಎಂದು ಕಚಾರ್ನ ಹೆಚ್ಚುವರಿ ಜಿಲ್ಲಾಧಿಕಾರಿ ಸುಮಿತ್ ಸಟ್ಟವನ್ ತಿಳಿಸಿದ್ದಾರೆ.</p>.<p>ಹೊರಗಡೆಯಿಂದ ರಾಜ್ಯಕ್ಕೆ ಬರುವವರಿಗೆ ಕೋವಿಡ್ ಪರೀಕ್ಷೆಯನ್ನು ಅಸ್ಸಾಂ ಸರ್ಕಾರ ಕಡ್ಡಾಯಪಡಿಸಿದೆ. ಉಚಿತವಾಗಿ ಉಚಿತ ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಯನ್ನು ನಡೆಸಲಿದ್ದು, ಬಳಿಕ ರೂ.500 ಪಡೆದು ಆರ್ಟಿ–ಪಿಸಿಆರ್ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕಾಗಿದೆ.</p>.<p>ಪ್ರಯಾಣಿಕರು ನಿಯಮ ಉಲ್ಲಂಘಿಸಿದ್ದಾರೆ. ನಮ್ಮ ಬಳಿ ಪ್ರಯಾಣಿಕರಿಗೆ ಸಂಬಂಧಿಸಿದ ವಿವರಗಳಿವೆ. ಅವರನ್ನು ಗುರುತಿಸಿ ಐಪಿಸಿ ಸೆಕ್ಷನ್ 188ರ ಅನ್ವಯ (ಸೇವೆಗೆ ಅಡ್ಡಿ) ಕ್ರಿಮಿನಲ್ ಮೊಕದ್ದಮೆ ದಾಖಲಿಸುತ್ತೇವೆ. 690 ಪ್ರಯಾಣಿಕರ ಪೈಕಿ 189 ಜನರಿಗೆ ಪರೀಕ್ಷೆ ನಡೆಸಿದ್ದು, 6 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ ಎಂದು ಸುಮಿತ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>