ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐಸಿಎಂಆರ್ ಮಹಾನಿರ್ದೇಶಕ ಬಲರಾಂ ಭಾರ್ಗವ್ ಅವರು, ‘ಆಸ್ಪತ್ರೆಗೆ ದಾಖಲಾದ ರೋಗಿಗಳಲ್ಲಿ ಮೊದಲ ಮತ್ತು ಎರಡನೇ ಅಲೆಗಳ ನಡುವಿನ ಸಾವುಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಆದರೆ, ಎರಡನೇ ಅಲೆಯಲ್ಲಿ ರೋಗಿಗಳಿಗೆ ಆಮ್ಲಜನಕದ ಅವಶ್ಯಕತೆ ಹೆಚ್ಚಾಗಿದೆ ಮತ್ತು ವೆಂಟಿಲೇಟರ್ ಅವಶ್ಯಕತೆ ಹೆಚ್ಚಿಲ್ಲ. ಮೊದಲ ಅಲೆಯಲ್ಲಿ ಶೇ 41.5ರಷ್ಟು ಆಮ್ಲಜನಕದ ಅವಶ್ಯಕತೆ ಇದ್ದರೆ ಎರಡನೇ ಅಲೆಯಲ್ಲಿ ಶೇ 54.5ರಷ್ಟು ಮಂದಿಗೆ ಆಮ್ಲಜನಕದ ಅವಶ್ಯಕತೆ ಉಂಟಾಗಿದೆ’ ಎಂದು ಮಾಹಿತಿ ನೀಡಿದರು.