ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಪತ್ರೆಯಲ್ಲಿ ಆಮ್ಲಜನಕ ಸೋರಿಕೆ: 14 ರೋಗಿಗಳು ಅಪಾಯದಿಂದ ಪಾರು

Last Updated 28 ಏಪ್ರಿಲ್ 2021, 8:54 IST
ಅಕ್ಷರ ಗಾತ್ರ

ಔರಂಗಾಬಾದ್‌: ‘ಮಹಾರಾಷ್ಟ್ರದ ಪರ್ಭಣಿ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಆಮ್ಲಜನಕ ಪೂರೈಸುವ ಪೈಪ್‌ಲೈನ್‌ ಮೇಲೆ ಮರದ ಕೊಂಬೆ ಬಿದ್ದು, ಆಮ್ಲಜನಕ ಸೋರಿಕೆ ಉಂಟಾಗಿತ್ತು. ಈ ವೇಳೆ ಅಪಾಯದಲ್ಲಿ ಸಿಲುಕಿದ್ದ 14 ರೋಗಿಗಳನ್ನು ಆಸ್ಪತ್ರೆಯ ಸಿಬ್ಬಂದಿ ರಕ್ಷಿಸಿದ್ದಾರೆ’ ಎಂದು ಅಧಿಕಾರಿಗಳು ಬುಧವಾರ ತಿಳಿಸಿದರು.

‘ಮಂಗಳವಾರ ರಾತ್ರಿ ಆಸ್ಪತ್ರೆಯ ಸಿಬ್ಬಂದಿ ಆಮ್ಲಜನಕ ಸೋರಿಕೆಯನ್ನು ಗಮನಿಸಿದ್ದಾರೆ. ಆ ಕೂಡಲೇ ಅವರು ರೋಗಿಗಳನ್ನು ರಕ್ಷಿಸಿ, ಅವರಿಗೆ ಉಸಿರಾಟಕ್ಕಾಗಿ ಜಂಬೋ ಆಕ್ಸಿಜನ್‌ ಸಿಲಿಂಡರ್‌ಗಳನ್ನು ಅಳವಡಿಸಿದ್ದಾರೆ’ ಎಂದು ಜಿಲ್ಲಾಧಿಕಾರಿ ಸಂಜಯ್ ಕುಂದೇತ್ಕರ್ ಅವರು ಹೇಳಿದರು.

‘ಆಮ್ಲಜನಕ ಶೇಖರಣಾ ಟ್ಯಾಂಕ್‌ನಿಂದ ತುರ್ತು ಚಿಕಿತ್ಸಾ ವಿಭಾಗಕ್ಕೆ ಆಮ್ಲಜನಕ ಪೂರೈಸುತ್ತಿದ್ದ ಪೈಪ್‌ಲೈನ್‌ ಮೇಲೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಮರದ ಕೊಂಬೆಯೊಂದು ಬಿದ್ದಿದೆ. ಇದರಿಂದಾಗಿ ಆಮ್ಲಜನಕದಲ್ಲಿ ಸೋರಿಕೆಯಾಗಿದೆ. ಈ ಬಗ್ಗೆ ತಿಳಿಯುತ್ತಿದ್ದಂತೆ ತುರ್ತು ಚಿಕಿತ್ಸಾ ವಿಭಾಗದಲ್ಲಿದ್ದ 14 ರೋಗಿಗಳಿಗೆ ಜಂಬೋ ಆಕ್ಸಿಜನ್‌ ಸಿಲಿಂಡರ್‌ಗಳನ್ನು ಅಳವಡಿಸಲಾಯಿತು’ ಎಂದು ಅವರು ಮಾಹಿತಿ ನೀಡಿದರು.

‘2–3 ನಿಮಿಷಗಳ ಕಾಲ ಆಮ್ಲಜನಕ ಪೂರೈಕೆಯಲ್ಲಿ ತಡೆಯುಂಟಾಗಿದೆ. ಆದರೆ ಪೈಪ್‌ಲೈನ್‌ ಅನ್ನು 2 ಗಂಟೆಯೊಳಗೆ ರಿಪೇರಿ ಮಾಡಲಾಗಿದೆ. ಈ ಘಟನೆಯಲ್ಲಿ ಯಾವುದೇ ಸಾವು–ನೋವು ಸಂಭವಿಸಿಲ್ಲ. ಆಮ್ಲಜನಕ ಪೂರೈಕೆಯನ್ನು ಬೆಳಿಗ್ಗೆ 4 ಗಂಟೆಯೊಳಗೆ ಮರುಸ್ಥಾಪಿಸಲಾಯಿತು’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT