<p><strong>ಪಣಜಿ: ‘</strong>ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಮ್ಲಜನಕದ ಹೊಸ ಟ್ಯಾಂಕ್ ನಿಯೋಜಿಸಲಾಗಿದೆ. ಇದರಿಂದಾಗಿ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಲ್ಲಿ ಸುಧಾರಣೆ ಕಂಡುಬಂದಿದೆ’ ಎಂದು ಗೋವಾದ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಅವರು ಭಾನುವಾರ ತಿಳಿಸಿದರು.</p>.<p>‘ಕಳೆದ ಐದು ದಿನಗಳಲ್ಲಿ (ಶನಿವಾರ ಬೆಳಿಗ್ಗೆ ತನಕ) ಬೆಳಿಗ್ಗೆ 2 ರಿಂದ ಬೆಳಿಗ್ಗೆ 6 ರ ನಡುವಿನ ಅವಧಿಯಲ್ಲಿ ಆಮ್ಲಜನಕ ಕೊರತೆಯಿಂದ 83 ರೋಗಿಗಳು ಈ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ’ ಎಂದು ಅಧಿಕೃತ ಅಂಕಿಅಂಶಗಳು ತಿಳಿಸಿವೆ.</p>.<p>‘20,000 ಕಿ.ಲೀ ಸಾಮರ್ಥ್ಯದ ಆಮ್ಲಜನಕ ಟ್ಯಾಂಕನ್ನು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ(ಜಿಎಂಸಿಎಚ್) ಶನಿವಾರ ನಿಯೋಜಿಸಲಾಗಿದೆ. ಈ ಬಳಿಕ ಆಸ್ಪತ್ರೆಯಲ್ಲಿ ಪರಿಸ್ಥಿತಿ ಸುಧಾರಿಸಿದೆ. ಮುಂದಿನ ದಿನಗಳಲ್ಲಿ ಆಮ್ಲಜನಕ ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಭಾವಿಸುತ್ತೇನೆ ’ ಎಂದು ಅವರು ಹೇಳಿದರು.</p>.<p>‘ಬಿಚೋಲಿಮ್ ಕೈಗಾರಿಕಾ ಎಸ್ಟೇಟ್ನಿಂದ ಆಮ್ಲಜನಕ ಟ್ಯಾಂಕ್ ಅನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇದರಿಂದಾಗಿ ಆಮ್ಲಜನಕ ಸಿಲಿಂಡರ್ಗಳ ಮೇಲೆ ಅವಲಂಬನೆಯು ಕಡಿಮೆಯಾಗಲಿದೆ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶನಿವಾರ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ: ‘</strong>ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಮ್ಲಜನಕದ ಹೊಸ ಟ್ಯಾಂಕ್ ನಿಯೋಜಿಸಲಾಗಿದೆ. ಇದರಿಂದಾಗಿ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಲ್ಲಿ ಸುಧಾರಣೆ ಕಂಡುಬಂದಿದೆ’ ಎಂದು ಗೋವಾದ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಅವರು ಭಾನುವಾರ ತಿಳಿಸಿದರು.</p>.<p>‘ಕಳೆದ ಐದು ದಿನಗಳಲ್ಲಿ (ಶನಿವಾರ ಬೆಳಿಗ್ಗೆ ತನಕ) ಬೆಳಿಗ್ಗೆ 2 ರಿಂದ ಬೆಳಿಗ್ಗೆ 6 ರ ನಡುವಿನ ಅವಧಿಯಲ್ಲಿ ಆಮ್ಲಜನಕ ಕೊರತೆಯಿಂದ 83 ರೋಗಿಗಳು ಈ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ’ ಎಂದು ಅಧಿಕೃತ ಅಂಕಿಅಂಶಗಳು ತಿಳಿಸಿವೆ.</p>.<p>‘20,000 ಕಿ.ಲೀ ಸಾಮರ್ಥ್ಯದ ಆಮ್ಲಜನಕ ಟ್ಯಾಂಕನ್ನು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ(ಜಿಎಂಸಿಎಚ್) ಶನಿವಾರ ನಿಯೋಜಿಸಲಾಗಿದೆ. ಈ ಬಳಿಕ ಆಸ್ಪತ್ರೆಯಲ್ಲಿ ಪರಿಸ್ಥಿತಿ ಸುಧಾರಿಸಿದೆ. ಮುಂದಿನ ದಿನಗಳಲ್ಲಿ ಆಮ್ಲಜನಕ ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಭಾವಿಸುತ್ತೇನೆ ’ ಎಂದು ಅವರು ಹೇಳಿದರು.</p>.<p>‘ಬಿಚೋಲಿಮ್ ಕೈಗಾರಿಕಾ ಎಸ್ಟೇಟ್ನಿಂದ ಆಮ್ಲಜನಕ ಟ್ಯಾಂಕ್ ಅನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇದರಿಂದಾಗಿ ಆಮ್ಲಜನಕ ಸಿಲಿಂಡರ್ಗಳ ಮೇಲೆ ಅವಲಂಬನೆಯು ಕಡಿಮೆಯಾಗಲಿದೆ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶನಿವಾರ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>