ನವದೆಹಲಿ: ‘ಜಮ್ಮು ಮತ್ತು ಕಾಶ್ಮೀರಕ್ಕೆ ಪುನಃ ‘ರಾಜ್ಯ‘ದ ಸ್ಥಾನಮಾನ ನೀಡುವಂತೆ ಒತ್ತಾಯಿಸಿರುವ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ, ಮುಂಬರುವ ಮುಂಗಾರು ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಸಿ, ಕಾಶ್ಮೀರದಲ್ಲಿ ಜಾರಿ ಮಾಡಿರುವ ‘ಅಹಿತಕರ‘ ಕಾನೂನುಗಳನ್ನು ರದ್ದುಗೊಳಿಸಿ, ಯಥಾಸ್ಥಿತಿಯನ್ನು ಮರು ಸ್ಥಾಪಿಸಬೇಕು‘ ಎಂದು ತಿಳಿಸಿದ್ದಾರೆ.