ನವದೆಹಲಿ: ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು, ಭಾರತೀಯ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್, ನಿವೃತ್ತ ಏರ್ ಮಾರ್ಷಲ್ ಡಾ. ಪದ್ಮಾ ಬಂಡೋಪಾದ್ಯಾಯ, ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ಚಾನುಲಾಲ್ ಮಿಶ್ರಾ ಸೇರಿದಂತೆ ಹಲವರು ಇಂದು ರಾಷ್ಟ್ರಪತಿಗಳಿಂದ ‘ಪದ್ಮ ಪ್ರಶಸ್ತಿ’ ಸ್ವೀಕರಿಸಿದರು.
ಇವರ ಜೊತೆಗೆ, ಬಾಲಿವುಡ್ ತಾರೆ ಕಂಗನಾ ರನೌಟ್, ಗಾಯಕ ಅದ್ನಾನ್ ಸಮಿ ಅವರೂ ಪದ್ಮಶ್ರೀ ಪ್ರಶಸ್ತಿ ಪಡೆದರು.
ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್, ಜಾರ್ಜ್ ಫರ್ನಾಂಡಿಸ್, ಅರುಣ್ ಜೇಟ್ಲಿ ಅವರಿಗೆ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುಷ್ಮಾ ಅವರ ಪುತ್ರಿ ಬಾನುಶ್ರೀ ಸ್ವರಾಜ್ ಅವರು ರಾಷ್ಟ್ರಪತಿಗಳಿಂದ ಪದವಿ ಸ್ವೀಕರಿಸಿದರು.
ಕರ್ನಾಟಕದ ಅಕ್ಷರ ಸಂತ ಹರೇಕಳ ಹಾಜಬ್ಬ, ಉದ್ಯಮಿ ವಿಜಯ ಸಂಕೇಶ್ವರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Delhi: Former External Affairs Minister Sushma Swaraj awarded the Padma Vibhushan award posthumously. Her daughter Bansuri Swaraj receives the award. pic.twitter.com/fernxD24j2