ಆಗಸ್ಟ್ 31, 2014ರಂದು, ಅಂದಿನ ವಿರೋಧ ಪಕ್ಷವಾಗಿದ್ದ ಪಿಟಿಐ ಮತ್ತು ಪಾಕಿಸ್ತಾನ್ ಅವಾಮಿ ತೆಹ್ರೀಕ್ (ಪಿಎಟಿ) ನಾಯಕರು ನೂರಾರು ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಿ ಪಿಟಿವಿ ಮತ್ತು ಸಂಸತ್ ಭವನದ ಆವರಣದ ಕಚೇರಿಯನ್ನು ಧ್ವಂಸಗೊಳಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿಯ ಮೇಲೆ ಗಂಭೀರವಾಗಿ ಹಲ್ಲೆ ಸಹ ನಡೆಸಿದ್ದರು ಎಂದು ಪ್ರಕರಣ ದಾಖಲಾಗಿತ್ತು. ಪ್ರಧಾನಿ ಇಮ್ರಾನ್ ಖಾನ್, ಅಲ್ವಿ, ಪಿಎಟಿ ಮುಖ್ಯಸ್ಥ ತಾಹಿರುಲ್ ಖಾದ್ರಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು.