<p id="thickbox_headline"><strong>ಇಸ್ಲಾಮಾಬಾದ್:</strong> 2019ರ ಫೆಬ್ರವರಿಯಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಭಾರತದ ಪೈಲಟ್ ಪಾಕಿಸ್ತಾನದ ಎಫ್–16 ವಿಮಾನವನ್ನು ಹೊಡೆದುರುಳಿಸಿದ್ದಾರೆ ಎಂಬ ಭಾರತದ ನಿಲುವನ್ನು ಪಾಕಿಸ್ತಾನ ಮಂಗಳವಾರ ತಿರಸ್ಕರಿಸಿದೆ. ಇದು ಆಧಾರ ರಹಿತವಾದುದು ಎಂದೂ ಅದು ಹೇಳಿದೆ.</p>.<p>2019ರ ಫೆಬ್ರವರಿ 27 ರಂದು ವೈಮಾನಿಕ ದಾಳಿಯಲ್ಲಿ ವಿಂಗ್ ಕಮಾಂಡರ್ ಆಗಿದ್ದ ಅಭಿನಂದನ್ ವರ್ಧಮಾನ್ (ಈಗ ಗ್ರೂಪ್ ಕ್ಯಾಪ್ಟನ್) ಅವರನ್ನು ಪಾಕಿಸ್ತಾನ ವಶಕ್ಕೆ ಪಡೆಯುವ ಮುನ್ನ ಅವರು ತಮ್ಮ ಮಿಗ್–21 ರಿಂದ ಪಾಕಿಸ್ತಾನದ ಎಫ್–16 ಜೆಟ್ ವಿಮಾನವನ್ನು ಹೊಡೆದುರುಳಿಸಿದ್ದರು.</p>.<p>ಅಭಿನಂದನ್ ಅವರನ್ನು ಮಾರ್ಚ್ 1ರ ಮಧ್ಯರಾತ್ರಿ ಪಾಕಿಸ್ತಾನ ಬಿಡುಗಡೆ ಮಾಡಿತ್ತು. ಕರ್ತವ್ಯ ಪ್ರಜ್ಞೆಯನ್ನು ಮೆರೆದ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ವೀರ ಚಕ್ರ ಪ್ರಶಸ್ತಿಯನ್ನು ಪ್ರದಾನ ಮಾಡಿದರು.</p>.<p>‘2019ರ ಫೆಬ್ರವರಿಯಲ್ಲಿ ಭಾರತದ ಪೈಲಟ್ವೊಬ್ಬರು ಪಾಕಿಸ್ತಾನದ ಎಫ್–16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದಾರೆ ಎಂಬ ಭಾರತದ ಸಂಪೂರ್ಣ ಆಧಾರ ರಹಿತ ವಾದವನ್ನು ಪಾಕಿಸ್ತಾನ ಸ್ಪಷ್ಟವಾಗಿ ತಿರಸ್ಕರಿಸುತ್ತದೆ’ ಎಂದು ವಿದೇಶಾಂಗ ಖಾತೆಯ ಕಚೇರಿಯು ಹೇಳಿಕೆಯೊಂದರಲ್ಲಿ ತಿಳಿಸಿದೆ.</p>.<p>‘ಅಂತರರಾಷ್ಟ್ರೀಯ ತಜ್ಞರು ಮತ್ತು ಅಮೆರಿಕ ಅಧಿಕಾರಿಗಳು ಪಾಕಿಸ್ತಾನದ ಎಫ್–16 ಯುದ್ಧ ವಿಮಾನಗಳ ಲೆಕ್ಕವನ್ನು ಪಡೆದ ನಂತರ ಆ ದಿನ ಯಾವುದೇ ಎಫ್–16 ವಿಮಾನವನ್ನು ಹೊಡೆದುರುಳಿಸಿಲ್ಲ ಎಂದು ಈಗಾಗಲೇ ದೃಢಪಡಿಸಿದ್ದಾರೆ’ ಎಂದು ಕಚೇರಿ ಹೇಳಿದೆ.</p>.<p>‘ಭಾರತದ ಹಗೆತನ ಮತ್ತು ಆಕ್ರಮಣಕಾರಿ ನೀತಿಯ ಹೊರತಾಗಿಯೂ ಪೈಲಟ್ ಬಿಡುಗಡೆ ಪಾಕಿಸ್ತಾನದ ಶಾಂತಿ ಬಯಕೆಗೆ ಸಾಕ್ಷಿಯಾಗಿದೆ’ ಎಂದೂ ಅದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p id="thickbox_headline"><strong>ಇಸ್ಲಾಮಾಬಾದ್:</strong> 2019ರ ಫೆಬ್ರವರಿಯಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಭಾರತದ ಪೈಲಟ್ ಪಾಕಿಸ್ತಾನದ ಎಫ್–16 ವಿಮಾನವನ್ನು ಹೊಡೆದುರುಳಿಸಿದ್ದಾರೆ ಎಂಬ ಭಾರತದ ನಿಲುವನ್ನು ಪಾಕಿಸ್ತಾನ ಮಂಗಳವಾರ ತಿರಸ್ಕರಿಸಿದೆ. ಇದು ಆಧಾರ ರಹಿತವಾದುದು ಎಂದೂ ಅದು ಹೇಳಿದೆ.</p>.<p>2019ರ ಫೆಬ್ರವರಿ 27 ರಂದು ವೈಮಾನಿಕ ದಾಳಿಯಲ್ಲಿ ವಿಂಗ್ ಕಮಾಂಡರ್ ಆಗಿದ್ದ ಅಭಿನಂದನ್ ವರ್ಧಮಾನ್ (ಈಗ ಗ್ರೂಪ್ ಕ್ಯಾಪ್ಟನ್) ಅವರನ್ನು ಪಾಕಿಸ್ತಾನ ವಶಕ್ಕೆ ಪಡೆಯುವ ಮುನ್ನ ಅವರು ತಮ್ಮ ಮಿಗ್–21 ರಿಂದ ಪಾಕಿಸ್ತಾನದ ಎಫ್–16 ಜೆಟ್ ವಿಮಾನವನ್ನು ಹೊಡೆದುರುಳಿಸಿದ್ದರು.</p>.<p>ಅಭಿನಂದನ್ ಅವರನ್ನು ಮಾರ್ಚ್ 1ರ ಮಧ್ಯರಾತ್ರಿ ಪಾಕಿಸ್ತಾನ ಬಿಡುಗಡೆ ಮಾಡಿತ್ತು. ಕರ್ತವ್ಯ ಪ್ರಜ್ಞೆಯನ್ನು ಮೆರೆದ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ವೀರ ಚಕ್ರ ಪ್ರಶಸ್ತಿಯನ್ನು ಪ್ರದಾನ ಮಾಡಿದರು.</p>.<p>‘2019ರ ಫೆಬ್ರವರಿಯಲ್ಲಿ ಭಾರತದ ಪೈಲಟ್ವೊಬ್ಬರು ಪಾಕಿಸ್ತಾನದ ಎಫ್–16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದಾರೆ ಎಂಬ ಭಾರತದ ಸಂಪೂರ್ಣ ಆಧಾರ ರಹಿತ ವಾದವನ್ನು ಪಾಕಿಸ್ತಾನ ಸ್ಪಷ್ಟವಾಗಿ ತಿರಸ್ಕರಿಸುತ್ತದೆ’ ಎಂದು ವಿದೇಶಾಂಗ ಖಾತೆಯ ಕಚೇರಿಯು ಹೇಳಿಕೆಯೊಂದರಲ್ಲಿ ತಿಳಿಸಿದೆ.</p>.<p>‘ಅಂತರರಾಷ್ಟ್ರೀಯ ತಜ್ಞರು ಮತ್ತು ಅಮೆರಿಕ ಅಧಿಕಾರಿಗಳು ಪಾಕಿಸ್ತಾನದ ಎಫ್–16 ಯುದ್ಧ ವಿಮಾನಗಳ ಲೆಕ್ಕವನ್ನು ಪಡೆದ ನಂತರ ಆ ದಿನ ಯಾವುದೇ ಎಫ್–16 ವಿಮಾನವನ್ನು ಹೊಡೆದುರುಳಿಸಿಲ್ಲ ಎಂದು ಈಗಾಗಲೇ ದೃಢಪಡಿಸಿದ್ದಾರೆ’ ಎಂದು ಕಚೇರಿ ಹೇಳಿದೆ.</p>.<p>‘ಭಾರತದ ಹಗೆತನ ಮತ್ತು ಆಕ್ರಮಣಕಾರಿ ನೀತಿಯ ಹೊರತಾಗಿಯೂ ಪೈಲಟ್ ಬಿಡುಗಡೆ ಪಾಕಿಸ್ತಾನದ ಶಾಂತಿ ಬಯಕೆಗೆ ಸಾಕ್ಷಿಯಾಗಿದೆ’ ಎಂದೂ ಅದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>