ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ರಾಜತಾಂತ್ರಿಕ ಅಧಿಕಾರಿಗೆ ಪಾಕಿಸ್ತಾನ ಸಮನ್ಸ್‌

ಎಲ್‌ಒಸಿಯಲ್ಲಿ ಕದನ ವಿರಾಮ ಉಲ್ಲಂಘನೆ ಆರೋಪ
Last Updated 23 ನವೆಂಬರ್ 2020, 11:11 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಭಾರತೀಯ ಸೇನೆ ಕದನ ವಿರಾಮ ಉಲ್ಲಂಘಿಸಿದೆ ಎನ್ನುವ ಆರೋಪದಡಿ ಭಾರತದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಕರೆದು ಪಾಕಿಸ್ತಾನ ಎಚ್ಚರಿಕೆ ನೀಡಿದೆ.

‘ಎಲ್‌ಒಸಿಯ ಖುಯಿರಟ್ಟಾ ವಲಯದಲ್ಲಿ ಭಾರತೀಯ ಪಡೆಗಳು ಭಾನುವಾರ ನಡೆಸಿದ ವಿವೇಚನೆಯಿಲ್ಲದ ಹಾಗೂ ಅಪ್ರಚೋದಿತ ಗುಂಡಿನ ದಾಳಿಗೆ 11 ನಾಗರಿಕರು ಮೃತಪಟ್ಟಿದ್ದಾರೆ’ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿ(ಎಫ್‌ಒ) ತಿಳಿಸಿದೆ. ‘ಪ್ರಸಕ್ತ ವರ್ಷದಲ್ಲಿ ಭಾರತವು 2,820 ಬಾರಿ ಕದನ ವಿರಾಮವನ್ನು ಉಲ್ಲಂಘಿಸಿದೆ. ಇದರಲ್ಲಿ 26 ನಾಗರಿಕರು ಮೃತಪಟ್ಟಿದ್ದು, 245 ನಾಗರಿಕರು ಗಾಯಗೊಂಡಿದ್ದಾರೆ’ ಎಂದು ಇಲಾಖೆ ಆರೋಪಿಸಿದೆ.

‘2003ರ ಕದನ ವಿರಾಮ ಒಪ್ಪಂದವನ್ನು ಗೌರವಿಸುವಂತೆ, ಭಾನುವಾರ ನಡೆದ ಗುಂಡಿನ ದಾಳಿಯ ತನಿಖೆ ನಡೆಸಲು ಹಾಗೂ ಎಲ್‌ಒಸಿಯಲ್ಲಿ ಮುಂದೆ ಇಂಥ ಘಟನೆಗಳು ನಡೆಯದಂತೆ ಕ್ರಮವಹಿಸಲು ಸೂಚಿಸಲು ಅಧಿಕಾರಿಗೆ ಸಮನ್ಸ್‌ ನೀಡಲಾಗಿದೆ’ ಎಂದು ಪ್ರಕಟಣೆಯಲ್ಲಿ ಎಫ್‌ಒ ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT