<p><strong>ಶ್ರೀನಗರ:</strong> ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಶುಕ್ರವಾರ ಕದನ ವಿರಾಮ ಉಲ್ಲಂಘಿಸಿ ನಡೆಸಿದ್ದ ಅಪ್ರಚೋದಿತ ದಾಳಿಯ ವೇಳೆ ಪಾಕಿಸ್ತಾನ ಸೇನೆಯು ಭಾರಿ ಪ್ರಮಾಣದ ತೋಪುಗಳನ್ನು ಬಳಸಿತ್ತು ಎಂದು ಹಿರಿಯ ಗಡಿ ಭದ್ರತಾ ಪಡೆಯ (ಬಿಎಸ್ಎಫ್) ಅಧಿಕಾರಿಯೊಬ್ಬರು ಭಾನುವಾರ ಹೇಳಿದರು.</p>.<p>ಈ ಕಾರಣದಿಂದಾಗಿಯೇ ಎಲ್ಒಸಿ ಬಳಿ ಗುರೇಜ್ ವಲಯದಿಂದ ಉರಿ ವಲಯದವರೆಗಿನ ಭಾರತದ ಭಾಗದ ಹಳ್ಳಿಗಳಲ್ಲಿ ಹೆಚ್ಚಿನ ಪ್ರಾಣಹಾನಿ ಹಾಗೂ ಆಸ್ತಿಗಳು ನಾಶವಾಗಿದೆ ಎಂದು ತಿಳಿಸಿದ್ದಾರೆ. ಈ ಪಾಕ್ ಯೋಧರು ಸೇರಿ 11 ಜನರು ಮೃತಪಟ್ಟಿದ್ದರು.</p>.<p>‘ಪ್ರಚೋದನೆ ಇಲ್ಲದೇ ಪಾಕಿಸ್ತಾನದ ಯೋಧರು ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಬಳಸಿದ್ದರು. ಸೇನೆಯೋಧರು ಹಾಗೂ ಬಿಎಸ್ಎಫ್ ಸಿಬ್ಬಂದಿ ಇದಕ್ಕೆ ತಕ್ಕ ಪ್ರತಿಕ್ರಿಯೆ ನೀಡಿದ್ದಾರೆ. ಇದರಲ್ಲಿ ಪಾಕಿಸ್ತಾನದ ಹಲವು ಬಂಕರ್ಗಳು ನಾಶವಾಗಿವೆ’ ಎಂದು ಬಿಎಸ್ಎಫ್ ಇನ್ಸ್ಪೆಕ್ಟರ್ ಜನರಲ್ (ಕಾಶ್ಮೀರ) ರಾಜೇಶ್ ಮಿಶ್ರಾ ತಿಳಿಸಿದರು.</p>.<p>ಮೃತ ಬಿಎಸ್ಎಫ್ ಸಬ್ಇನ್ಸ್ಪೆಕ್ಟರ್ ರಾಕೇಶ್ ದೋವಲ್ ಅವರ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಈ ಕೃತ್ಯದ ವೇಳೆ 250–300 ಉಗ್ರರು ಗಡಿ ದಾಟಿ ಒಳನುಸುಳಲು ಸಜ್ಜಾಗಿದ್ದರು. ಈ ಪ್ರಯತ್ನವನ್ನು ಬಿಎಸ್ಎಫ್ ಸಿಬ್ಬಂದಿ ಹಾಗೂ ಯೋಧರು ವಿಫಲಗೊಳಿಸಿದ್ದಾರೆ. ಪಾಕಿಸ್ತಾನದ ಈ ಕೃತ್ಯದಲ್ಲಿ ನಾಗರಿಕರು ಪ್ರಾಣ ಕಳೆದುಕೊಂಡಿರುವುದನ್ನು ಮತ್ತು ಅವರ ಆಸ್ತಿಯು ಹಾನಿಯಾಗಿರುವುದನ್ನು ಮಾನವ ಹಕ್ಕುಗಳ ರಕ್ಷಣೆ ಸಂಸ್ಥೆಗಳು ಗಮನಿಸಬೇಕು’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಶುಕ್ರವಾರ ಕದನ ವಿರಾಮ ಉಲ್ಲಂಘಿಸಿ ನಡೆಸಿದ್ದ ಅಪ್ರಚೋದಿತ ದಾಳಿಯ ವೇಳೆ ಪಾಕಿಸ್ತಾನ ಸೇನೆಯು ಭಾರಿ ಪ್ರಮಾಣದ ತೋಪುಗಳನ್ನು ಬಳಸಿತ್ತು ಎಂದು ಹಿರಿಯ ಗಡಿ ಭದ್ರತಾ ಪಡೆಯ (ಬಿಎಸ್ಎಫ್) ಅಧಿಕಾರಿಯೊಬ್ಬರು ಭಾನುವಾರ ಹೇಳಿದರು.</p>.<p>ಈ ಕಾರಣದಿಂದಾಗಿಯೇ ಎಲ್ಒಸಿ ಬಳಿ ಗುರೇಜ್ ವಲಯದಿಂದ ಉರಿ ವಲಯದವರೆಗಿನ ಭಾರತದ ಭಾಗದ ಹಳ್ಳಿಗಳಲ್ಲಿ ಹೆಚ್ಚಿನ ಪ್ರಾಣಹಾನಿ ಹಾಗೂ ಆಸ್ತಿಗಳು ನಾಶವಾಗಿದೆ ಎಂದು ತಿಳಿಸಿದ್ದಾರೆ. ಈ ಪಾಕ್ ಯೋಧರು ಸೇರಿ 11 ಜನರು ಮೃತಪಟ್ಟಿದ್ದರು.</p>.<p>‘ಪ್ರಚೋದನೆ ಇಲ್ಲದೇ ಪಾಕಿಸ್ತಾನದ ಯೋಧರು ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಬಳಸಿದ್ದರು. ಸೇನೆಯೋಧರು ಹಾಗೂ ಬಿಎಸ್ಎಫ್ ಸಿಬ್ಬಂದಿ ಇದಕ್ಕೆ ತಕ್ಕ ಪ್ರತಿಕ್ರಿಯೆ ನೀಡಿದ್ದಾರೆ. ಇದರಲ್ಲಿ ಪಾಕಿಸ್ತಾನದ ಹಲವು ಬಂಕರ್ಗಳು ನಾಶವಾಗಿವೆ’ ಎಂದು ಬಿಎಸ್ಎಫ್ ಇನ್ಸ್ಪೆಕ್ಟರ್ ಜನರಲ್ (ಕಾಶ್ಮೀರ) ರಾಜೇಶ್ ಮಿಶ್ರಾ ತಿಳಿಸಿದರು.</p>.<p>ಮೃತ ಬಿಎಸ್ಎಫ್ ಸಬ್ಇನ್ಸ್ಪೆಕ್ಟರ್ ರಾಕೇಶ್ ದೋವಲ್ ಅವರ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಈ ಕೃತ್ಯದ ವೇಳೆ 250–300 ಉಗ್ರರು ಗಡಿ ದಾಟಿ ಒಳನುಸುಳಲು ಸಜ್ಜಾಗಿದ್ದರು. ಈ ಪ್ರಯತ್ನವನ್ನು ಬಿಎಸ್ಎಫ್ ಸಿಬ್ಬಂದಿ ಹಾಗೂ ಯೋಧರು ವಿಫಲಗೊಳಿಸಿದ್ದಾರೆ. ಪಾಕಿಸ್ತಾನದ ಈ ಕೃತ್ಯದಲ್ಲಿ ನಾಗರಿಕರು ಪ್ರಾಣ ಕಳೆದುಕೊಂಡಿರುವುದನ್ನು ಮತ್ತು ಅವರ ಆಸ್ತಿಯು ಹಾನಿಯಾಗಿರುವುದನ್ನು ಮಾನವ ಹಕ್ಕುಗಳ ರಕ್ಷಣೆ ಸಂಸ್ಥೆಗಳು ಗಮನಿಸಬೇಕು’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>