<p><strong>ಜಮ್ಮು:</strong> ಭಾರತದ ಗಡಿಯೊಳಗೆ ನುಗ್ಗಲು ಪ್ರಯತ್ನಿಸಿದ ಪಾಕಿಸ್ತಾನದ ವ್ಯಕ್ತಿಯನ್ನು ಬಿಎಸ್ಎಫ್ ಪಡೆಯು ಜಮ್ಮುವಿನ ಅಂತರರಾಷ್ಟ್ರೀಯ ಗಡಿಯ ಸಮೀಪ ಹೊಡೆದುರುಳಿಸಿದೆ.</p>.<p>ಗಡಿಯಲ್ಲಿ ತಡೆ ಬೇಲಿಯನ್ನು ದಾಟುವ ಉದ್ದೇಶದಿಂದ ಮುಂದೆ ಬರುತ್ತಿದ್ದ ವ್ಯಕ್ತಿಗೆ ಎಚ್ಚರಿಕೆ ನೀಡಿದರೂ ನಿಲ್ಲದ ಕಾರಣ, ಭದ್ರತಾ ಸಿಬ್ಬಂದಿ ಮೂರು ಸುತ್ತು ಗುಂಡು ಹಾರಿಸಿರುವುದಾಗಿ ಬಿಎಸ್ಎಫ್ ವಕ್ತಾರರು ತಿಳಿಸಿದ್ದಾರೆ.</p>.<p>'ಪಾಕಿಸ್ತಾನದ ಕಡೆಯಿಂದ ವ್ಯಕ್ತಿಯೊಬ್ಬ ವೇಗವಾಗಿ ಗಡಿ ಬೇಲಿಯ ಕಡೆಗೆ ಬರುತ್ತಿರುವುದನ್ನು ಭದ್ರತಾ ಸಿಬ್ಬಂದಿ ಗಮನಿಸಿದ್ದಾರೆ. ಆತನನ್ನು ಅಲ್ಲಿಯೇ ನಿಲ್ಲುವಂತೆ ಸಿಬ್ಬಂದಿ ಸೂಚಿಸಿದ್ದಾರೆ. ಆದರೆ, ಆತ ನಿಲ್ಲದೆ ಮುಂದೆ ಬಂದಿದ್ದಾನೆ' ಎಂದು ಮಾಹಿತಿ ನೀಡಿದ್ದಾರೆ.</p>.<p><strong>ಇದನ್ನೂ ಓದಿ–</strong><a href="https://www.prajavani.net/india-news/enforcement-directorate-summons-maharashtra-shiv-sena-mp-sanjay-raut-patra-chawl-land-scam-949291.html" itemprop="url">ಸಂಜಯ್ ರಾವುತ್ಗೆ ಇ.ಡಿ ಸಮನ್ಸ್: 'ತಲೆ ತೆಗೆದರೂ ಗುವಾಹಟಿ ದಾರಿ ಹಿಡಿಯೆನು' </a></p>.<p>ನುಸುಳುತ್ತಿದ್ದ ವ್ಯಕ್ತಿಯ ಮೃತ ದೇಹವನ್ನು ಸೋಮವಾರ ಬೆಳಿಗ್ಗೆ ಪೊಲೀಸರಿಗೆ ಒಪ್ಪಿಸಲಾಗಿದೆ. ಆತನಿಂದ ಯಾವುದೇ ವಸ್ತುಗಳನ್ನು ವಶಪಡಿಸಿಕೊಂಡಿಲ್ಲ ಎಂದಿದ್ದಾರೆ.</p>.<p>ಜೂನ್ 30ರಿಂದ ಅಮರನಾಥ ಯಾತ್ರೆ ಶುರುವಾಗುವ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು:</strong> ಭಾರತದ ಗಡಿಯೊಳಗೆ ನುಗ್ಗಲು ಪ್ರಯತ್ನಿಸಿದ ಪಾಕಿಸ್ತಾನದ ವ್ಯಕ್ತಿಯನ್ನು ಬಿಎಸ್ಎಫ್ ಪಡೆಯು ಜಮ್ಮುವಿನ ಅಂತರರಾಷ್ಟ್ರೀಯ ಗಡಿಯ ಸಮೀಪ ಹೊಡೆದುರುಳಿಸಿದೆ.</p>.<p>ಗಡಿಯಲ್ಲಿ ತಡೆ ಬೇಲಿಯನ್ನು ದಾಟುವ ಉದ್ದೇಶದಿಂದ ಮುಂದೆ ಬರುತ್ತಿದ್ದ ವ್ಯಕ್ತಿಗೆ ಎಚ್ಚರಿಕೆ ನೀಡಿದರೂ ನಿಲ್ಲದ ಕಾರಣ, ಭದ್ರತಾ ಸಿಬ್ಬಂದಿ ಮೂರು ಸುತ್ತು ಗುಂಡು ಹಾರಿಸಿರುವುದಾಗಿ ಬಿಎಸ್ಎಫ್ ವಕ್ತಾರರು ತಿಳಿಸಿದ್ದಾರೆ.</p>.<p>'ಪಾಕಿಸ್ತಾನದ ಕಡೆಯಿಂದ ವ್ಯಕ್ತಿಯೊಬ್ಬ ವೇಗವಾಗಿ ಗಡಿ ಬೇಲಿಯ ಕಡೆಗೆ ಬರುತ್ತಿರುವುದನ್ನು ಭದ್ರತಾ ಸಿಬ್ಬಂದಿ ಗಮನಿಸಿದ್ದಾರೆ. ಆತನನ್ನು ಅಲ್ಲಿಯೇ ನಿಲ್ಲುವಂತೆ ಸಿಬ್ಬಂದಿ ಸೂಚಿಸಿದ್ದಾರೆ. ಆದರೆ, ಆತ ನಿಲ್ಲದೆ ಮುಂದೆ ಬಂದಿದ್ದಾನೆ' ಎಂದು ಮಾಹಿತಿ ನೀಡಿದ್ದಾರೆ.</p>.<p><strong>ಇದನ್ನೂ ಓದಿ–</strong><a href="https://www.prajavani.net/india-news/enforcement-directorate-summons-maharashtra-shiv-sena-mp-sanjay-raut-patra-chawl-land-scam-949291.html" itemprop="url">ಸಂಜಯ್ ರಾವುತ್ಗೆ ಇ.ಡಿ ಸಮನ್ಸ್: 'ತಲೆ ತೆಗೆದರೂ ಗುವಾಹಟಿ ದಾರಿ ಹಿಡಿಯೆನು' </a></p>.<p>ನುಸುಳುತ್ತಿದ್ದ ವ್ಯಕ್ತಿಯ ಮೃತ ದೇಹವನ್ನು ಸೋಮವಾರ ಬೆಳಿಗ್ಗೆ ಪೊಲೀಸರಿಗೆ ಒಪ್ಪಿಸಲಾಗಿದೆ. ಆತನಿಂದ ಯಾವುದೇ ವಸ್ತುಗಳನ್ನು ವಶಪಡಿಸಿಕೊಂಡಿಲ್ಲ ಎಂದಿದ್ದಾರೆ.</p>.<p>ಜೂನ್ 30ರಿಂದ ಅಮರನಾಥ ಯಾತ್ರೆ ಶುರುವಾಗುವ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>