ಕದನ ವಿರಾಮ ಉಲ್ಲಂಘನೆ ತಡೆಯುವಲ್ಲಿ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದರಲ್ಲಿ ನಿರ್ಲಕ್ಷ್ಯ ವಹಿಸಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ‘ನಿರ್ಲಕ್ಷ್ಯ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸೇನೆಯು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಂಡಿದೆ. ನಾವು ಅಧಿಕಾರಕ್ಕೆ ಬಂದ ನಂತರ ಸೇನೆ ಕಠಿಣ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಹೇಳುತ್ತಿಲ್ಲ. ನಮ್ಮ ಸೇನೆಯು ಮೊದಲಿನಿಂದಲೂ ಪರಿಣಾಮಕಾರಿ ಕ್ರಮ ತೆಗೆದುಕೊಂಡಿದೆ. ಕದನ ವಿರಾಮ ಉಲ್ಲಂಘನೆ ಎದುರಿಸಲು ತೆಗೆದುಕೊಳ್ಳುತ್ತಿರುವ ಕ್ರಮಗಳು ಮತ್ತು ಶಸ್ತ್ರಾಸ್ತ್ರಗಳ ಬಗ್ಗೆ ವಿವರಗಳನ್ನು ನೀಡುವುದು ಸೂಕ್ತವಲ್ಲ’ ಎಂದು ಹೇಳಿದರು.