‘ನಿಯೋಗವು ಸ್ಥಳ ಭೇಟಿ ನೀಡಿದ ಸಂದರ್ಭದಲ್ಲಿ, ಹೋಟೆಲ್ವೊಂದರ ತ್ಯಾಜ್ಯ ಕಡಲತೀರವನ್ನು ಸೇರುತ್ತಿರುವುದು ಕಂಡುಬಂತು. ಈ ವಿಷಯವಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಗರ ಪಾಲಿಕೆಗೆ ನಿರ್ದೇಶನ ನೀಡಬೇಕು. ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರದಿಂದ ಪರವಾನಗಿ ಪಡೆಯದ ಹೊರತು, ಕಡಲತೀರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದಂತೆ ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಬೇಕು’ ಎಂದು ವರದಿಯಲ್ಲಿ ಹೇಳಲಾಗಿದೆ.