ಇದಕ್ಕೂ ಮುನ್ನ ಮಸೂದೆಗೆ ಆಕ್ಷೇಪ ವ್ಯಕ್ತಪಡಿಸಿದ ಕೆಲಸದಸ್ಯರು, ಕೇಂದ್ರ ಈ ವಿಷಯದಲ್ಲಿ ವಿಸ್ತೃತ ಚರ್ಚೆ ನಡೆಸಬೇಕು ಎಂದು ಸಲಹೆ ಮಾಡಿದರು. ಮಸೂದೆಯನ್ನು ಸಮರ್ಥಿಸಿಕೊಂಡ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು, ಮಸೂದೆಗಳು ಹೋಮಿಯೊಪಥಿ ಮತ್ತು ಭಾರತೀಯ ವೈದ್ಯ ಪದ್ಧತಿ ಔಷಧಗಳಿಗೆ ಅನ್ವಯಿಸಿ ಉತ್ತಮ ಆಡಳಿತಕ್ಕೆ ನೆರವಾಗಲಿವೆ ಎಂದು ತಿಳಿಸಿದರು.