ಈ ವಿಚಾರವಾಗಿ ಮುಂಬೈನಲ್ಲಿ ಗುರುವಾರ ಮಾತನಾಡಿರುವ ಅವರು, 'ಇದು ರೂಢಿಗತ ಆಡಳಿತಾತ್ಮಕ ವರ್ಗಾವಣೆ ಅಲ್ಲ. ಸಚಿನ್ ವಾಜೆ ಪ್ರಕರಣದಲ್ಲಿ ಮುಕ್ತ ಹಾಗೂ ನ್ಯಾಯಯುತ ತನಿಖೆ ನಡೆಯಬೇಕಿದೆ. ಆ ಹಿನ್ನೆಲೆಯಲ್ಲಿ ಮುಂಬೈ ಪೊಲೀಸ್ ಆಯುಕ್ತರ ಹುದ್ದೆಯಿಂದ ಪರಮ್ ಬೀರ್ ಸಿಂಗ್ ಅವರನ್ನು ವರ್ಗಾಯಿಸಲಾಯಿತು' ಎಂದು ದೇಶ್ಮುಖ್ ಹೇಳಿದ್ದಾರೆ.