ಈ ವಿಚಾರವಾಗಿ ಟ್ವೀಟ್ ಮಾಡಿರುವ ಎನ್ಸಿಪಿ ವಕ್ತಾರ ಕ್ಲೈಡ್ ಕ್ರಾಸ್ಟೊ, 'ಪರೀಕ್ಷೆಯ ಅವಧಿಯಲ್ಲಿ ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗುತ್ತಾರೆ. ಒತ್ತಡವನ್ನು ದೂರಮಾಡಲು ಅವರೊಂದಿಗೆ ಸಂವಾದನಡೆಸಿದ್ದಕ್ಕಾಗಿ ಪ್ರಧಾನ ಮಂತ್ರಿಯವರಿಗೆ ಧನ್ಯವಾದ ಹೇಳುತ್ತೇವೆ. ಆದರೆ, ವಿದ್ಯಾರ್ಥಿಗಳ ಪೋಷಕರು ಹಾಗೂ ಸಾಮಾನ್ಯ ಜನರ ಸಂಕಷ್ಟಗಳನ್ನು ಪರಿಹರಿಸಲು ‘ಪರೇಶಾನಿ ಪೇ ಚರ್ಚಾ’ ಕಾರ್ಯಕ್ರಮವನ್ನು ಯಾವಾಗ ನಡೆಸುತ್ತೀರಿ’ ಎಂದು ಕ್ರಾಸ್ಟೊ ಪ್ರಶ್ನಿಸಿದ್ದಾರೆ.