ಬುಧವಾರ ಮಸೂದೆ ಮಂಡಿಸಿದಾಗ ವಿರೋಧ ಪಕ್ಷಗಳಿಂದ ವಿರೋಧ ವ್ಯಕ್ತವಾಗಿತ್ತು. ಈ ಮಸೂದೆ ರಾಜ್ಯ ಸರ್ಕಾರಗಳ ಹಕ್ಕುಗಳನ್ನು ಕಸಿದುಕೊಳ್ಳಲಿದೆ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಆರೋಪಿಸಿದ ವಿರೋಧ ಪಕ್ಷಗಳ ಸಂಸದರು, ಮಂಡನೆಗೂ ಮೊದಲು ಮಸೂದೆಯನ್ನು ಸ್ಥಾಯಿ ಸಮಿತಿಯ ಪರಿಶೀಲನೆಗೆ ಕಳುಹಿಸಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ, ಕೇಂದ್ರ ಸರ್ಕಾರ ಈ ಬೇಡಿಕೆಗೆ ಕಿವಿಗೊಟ್ಟಿರಲಿಲ್ಲ.