ಈ ಅಧಿವೇಶನದಲ್ಲಿ ಕೃಷಿ ಕಾಯ್ದೆ ರದ್ದು ಮಸೂದೆಯನ್ನು ಚರ್ಚೆ ಮಾಡದೆಯೇ ಅಂಗೀಕರಿಸಲು ಬಿಡುವುದಿಲ್ಲ. ಚರ್ಚೆಗೆ ಅವಕಾಶ ಕೊಡದೇ ಇದ್ದರೆ, ಕಲಾಪ ಸುಗಮವಾಗಿ ನಡೆಯವುದಿಲ್ಲ ಎಂದು ವಿರೋಧ ಪಕ್ಷಗಳು ಎಚ್ಚರಿಕೆ ನೀಡಿವೆ. ರೈತರ ಸಮಸ್ಯೆಗಳ ಬಗ್ಗೆ ಈ ಅಧಿವೇಶನದಲ್ಲಿ ವ್ಯಾಪಕವಾದ ಚರ್ಚೆ ನಡೆಯಬೇಕು. ಕನಿಷ್ಠ ಬೆಂಬಲ ಬೆಲೆ, ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸುವುದಾಗಿ ವಿರೋಧ ಪಕ್ಷಗಳು ಹೇಳಿವೆ.