ರಾಜ್ಯಸಭೆಯು ಸಂವಿಧಾನ (ಪರಿಶಿಷ್ಟ ಪಂಗಡ) ಆದೇಶ (ನಾಲ್ಕನೇ ತಿದ್ದುಪಡಿ) ಮಸೂದೆ 2022 ಅನ್ನು ಗುರುವಾರ ಧ್ವನಿಮತದ ಮೂಲಕ ಅಂಗೀಕರಿಸಿತು. ಈ ಮಸೂದೆಗೆ ಲೋಕಸಭೆಯಲ್ಲಿ ಡಿಸೆಂಬರ್ 19ರಂದು ಅಂಗೀಕಾರ ನೀಡಲಾಗಿತ್ತು. ಬೆಟ್ಟ ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಸಂಬಂಧ ಸಮುದಾಯದ ಜನರು 30 ವರ್ಷಗಳಿಂದ ಹೋರಾಟ ಮಾಡುತ್ತಿದ್ದರು. ಮೈಸೂರು, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಈ ಸಮುದಾಯದ ಜನರು ಇದ್ದಾರೆ.