<p><strong>ನವದೆಹಲಿ (ಪಿಟಿಐ):</strong> ‘ಪಳೆಯುಳಿಕೆಯೇತರ ಇಂಧನ ಮೂಲಗಳಾದ ಬಯೋಮಾಸ್, ಇಥೆನಾಲ್ ಮತ್ತು ಹಸಿರು ಹೈಡ್ರೋಜನ್ ಬಳಕೆಯನ್ನು ಕಡ್ಡಾಯಗೊಳಿಸುವ ಇಂಧನ ಸಂರಕ್ಷಣಾ ಮಸೂದೆ (ತಿದ್ದುಪಡಿ)–2022ಕ್ಕೆ ರಾಜ್ಯಸಭೆಯಲ್ಲಿ ಅಂಗೀಕಾರ ದೊರೆತಿದೆ.</p>.<p>ಈ ವರ್ಷದ ಆಗಸ್ಟ್ನಲ್ಲಿ ನಡೆದಿದ್ದ ಲೋಕಸಭಾ ಅಧಿವೇಶನದಲ್ಲಿ ಈ ಮಸೂದೆಗೆ ಅಂಗೀಕಾರ ದೊರೆತಿತ್ತು. ರಾಜ್ಯಸಭೆಯಲ್ಲಿ ಸೋಮವಾರ ಇದನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.</p>.<p>ಇಂಧನ ಬಳಕೆಯ ಮಾನದಂಡಗಳನ್ನು ಅನುಸರಿಸಲು ವಿಫಲವಾಗುವ ಕೈಗಾರಿಕಾ ಘಟಕಗಳು ಅಥವಾ ಹಡಗುಗಳು ಮತ್ತು ವಾಹನ ಉತ್ಪಾದನಾ ಕಂಪನಿಗಳಿಗೆ ದಂಡ ವಿಧಿಸುವ ಅವಕಾಶವನ್ನು ಈ ಮಸೂದೆ ಕಲ್ಪಿಸಲಿದೆ.</p>.<p>ನವೀಕರಿಸಬಹುದಾದ ಇಂಧನಗಳ ಬಳಕೆ ಉತ್ತೇಜಿಸುವ ಹಾಗೂ ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ತನ್ನ ಅಂತರರಾಷ್ಟ್ರೀಯ ಬದ್ಧತೆ ಸಾಧಿಸಲು ದೇಶಕ್ಕೆ ಈ ಮಸೂದೆ ಸಹಕಾರಿಯಾಗಿದೆ.ಪ್ಯಾರಿಸ್ ಒಪ್ಪಂದಕ್ಕೆ ಸಂಬಂಧಿಸಿದ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲೂ ಇದು ಭಾರತಕ್ಕೆ ನೆರವಾಗಲಿದೆ.</p>.<p>ಮಸೂದೆ ಮೇಲಿನ ಚರ್ಚೆಯ ವೇಳೆ ಮಾತನಾಡಿದನವೀಕರಿಸಬಹುದಾದ ಇಂಧನ ಸಚಿವ ಆರ್.ಕೆ.ಸಿಂಗ್, ‘ಈ ಮಸೂದೆಯು ಪರಿಸರ ಸ್ನೇಹಿಯಾಗಿದ್ದು, ದೇಶದಲ್ಲಿ ಕಾರ್ಬನ್ ಟ್ರೇಡಿಂಗ್ಗೆ ಅನುವು ಮಾಡಿಕೊಡಲಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ‘ಪಳೆಯುಳಿಕೆಯೇತರ ಇಂಧನ ಮೂಲಗಳಾದ ಬಯೋಮಾಸ್, ಇಥೆನಾಲ್ ಮತ್ತು ಹಸಿರು ಹೈಡ್ರೋಜನ್ ಬಳಕೆಯನ್ನು ಕಡ್ಡಾಯಗೊಳಿಸುವ ಇಂಧನ ಸಂರಕ್ಷಣಾ ಮಸೂದೆ (ತಿದ್ದುಪಡಿ)–2022ಕ್ಕೆ ರಾಜ್ಯಸಭೆಯಲ್ಲಿ ಅಂಗೀಕಾರ ದೊರೆತಿದೆ.</p>.<p>ಈ ವರ್ಷದ ಆಗಸ್ಟ್ನಲ್ಲಿ ನಡೆದಿದ್ದ ಲೋಕಸಭಾ ಅಧಿವೇಶನದಲ್ಲಿ ಈ ಮಸೂದೆಗೆ ಅಂಗೀಕಾರ ದೊರೆತಿತ್ತು. ರಾಜ್ಯಸಭೆಯಲ್ಲಿ ಸೋಮವಾರ ಇದನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.</p>.<p>ಇಂಧನ ಬಳಕೆಯ ಮಾನದಂಡಗಳನ್ನು ಅನುಸರಿಸಲು ವಿಫಲವಾಗುವ ಕೈಗಾರಿಕಾ ಘಟಕಗಳು ಅಥವಾ ಹಡಗುಗಳು ಮತ್ತು ವಾಹನ ಉತ್ಪಾದನಾ ಕಂಪನಿಗಳಿಗೆ ದಂಡ ವಿಧಿಸುವ ಅವಕಾಶವನ್ನು ಈ ಮಸೂದೆ ಕಲ್ಪಿಸಲಿದೆ.</p>.<p>ನವೀಕರಿಸಬಹುದಾದ ಇಂಧನಗಳ ಬಳಕೆ ಉತ್ತೇಜಿಸುವ ಹಾಗೂ ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ತನ್ನ ಅಂತರರಾಷ್ಟ್ರೀಯ ಬದ್ಧತೆ ಸಾಧಿಸಲು ದೇಶಕ್ಕೆ ಈ ಮಸೂದೆ ಸಹಕಾರಿಯಾಗಿದೆ.ಪ್ಯಾರಿಸ್ ಒಪ್ಪಂದಕ್ಕೆ ಸಂಬಂಧಿಸಿದ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲೂ ಇದು ಭಾರತಕ್ಕೆ ನೆರವಾಗಲಿದೆ.</p>.<p>ಮಸೂದೆ ಮೇಲಿನ ಚರ್ಚೆಯ ವೇಳೆ ಮಾತನಾಡಿದನವೀಕರಿಸಬಹುದಾದ ಇಂಧನ ಸಚಿವ ಆರ್.ಕೆ.ಸಿಂಗ್, ‘ಈ ಮಸೂದೆಯು ಪರಿಸರ ಸ್ನೇಹಿಯಾಗಿದ್ದು, ದೇಶದಲ್ಲಿ ಕಾರ್ಬನ್ ಟ್ರೇಡಿಂಗ್ಗೆ ಅನುವು ಮಾಡಿಕೊಡಲಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>