ಸಭೆಯಲ್ಲಿ ಭಾಗಿಯಾಗಿದ್ದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಈ ಅಧಿವೇಶನದಲ್ಲಿ ಮಂಡಿಸಲು ಸಿದ್ಧಮಾಡಿಕೊಂಡಿರುವ ಮಸೂದೆಗಳ ಪಟ್ಟಿಯನ್ನು ಸಭೆಯ ಮುಂದಿಟ್ಟರು. ಆಗ, ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಅವರು, ಬೆಲೆ ಏರಿಕೆ, ನಿರುದ್ಯೋಗ ಮತ್ತು ತನಿಖಾ ಸಂಸ್ಥೆಗಳ ದುರ್ಬಳಕೆಯ ವಿಚಾರಗಳನ್ನು ಚರ್ಚೆಗೆ ಎತ್ತಿಕೊಳ್ಳಬೇಕು ಎಂದು ಒತ್ತಾಯಿಸಿದರು.