‘ನೀವು ನಿಯಮ ಪುಸ್ತಕಗಳನ್ನು ಹಿಡಿದುಕೊಂಡು ಬರುತ್ತೀರಿ. ಆದರೆ, ನಿಯಮಗಳನ್ನು ಅನುಸರಿಸುವುದಿಲ್ಲ. ಸದನದೊಳಕ್ಕೆ ಫಲಕಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಹಾಗಿದ್ದರೂ ಫಲಕಗಳನ್ನು ತಂದಿದ್ದೀರಿ. ರೈತರಿಗೆ ಸಂಬಂಧಿಸಿದ ವಿಷಯಗಳನ್ನು ಸದನದ ಹೊರಗೆ ಎತ್ತುತ್ತೀರಿ. ಆದರೆ, ಸದನದಲ್ಲಿ ಆ ಬಗ್ಗೆ ಚರ್ಚೆ ನಡೆದಾಗ ಭಾಗವಹಿಸುವುದಿಲ್ಲ’ ಎಂದು ಓಂ ಬಿರ್ಲಾ ಅವರು ಹೇಳಿದರು. ಆದರೆ, ವಿರೋಧ ಪಕ್ಷಗಳ ಸಂಸದರು ಈ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ.