ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಾರ್ಥ ಚಟರ್ಜಿಗೆ ಆಗಸ್ಟ್ 31ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಈ ಮಧ್ಯೆ, ಪಾರ್ಥ ಚಟರ್ಜಿ ಸಹಾಯಕನ ಪತ್ತೆಗೆ ಆದಾಯ ತೆರಿಗೆ ಇಲಾಖೆಯು ಶೋಧ ನಡೆಸುತ್ತಿದ್ದು, ಶುಕ್ರವಾರ ಜಾರ್ಖಂಡ್ನ ಹೋಟೆಲ್ ಒಂದರ ಮೇಲೆ ದಾಳಿ ನಡೆಸಿತ್ತು.
ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಶಾಲಾ ಸೇವಾ ಆಯೋಗ (ಎಸ್ಎಸ್ಸಿ) ನಡೆಸಿದ ಶಿಕ್ಷಕರ ನೇಮಕಾತಿಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ, ಜುಲೈ 23ರಂದು ಪಾರ್ಥ ಚಟರ್ಜಿ ಹಾಗೂ ಅವರ ಆಪ್ತೆ ಅರ್ಪಿತಾ ಅವರನ್ನು ಬಂಧಿಸಲಾಗಿತ್ತು.