<p><strong>ನವದೆಹಲಿ: </strong>ರಾಜಕೀಯ ಪಕ್ಷಗಳು ತಾವು ಕಣಕ್ಕಿಳಿಸುವ ಅಭ್ಯರ್ಥಿಗಳ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಕುರಿತ ಮಾಹಿತಿಯನ್ನು ಪಕ್ಷದ ವೆಬ್ಸೈಟ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಚುನಾವಣಾ ಆಯೋಗ ಶುಕ್ರವಾರ ಸೂಚಿಸಿದೆ.</p>.<p>ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ದಿಷ್ಟ ವ್ಯಕ್ತಿಯನ್ನು ಆಯ್ಕೆ ಮಾಡಿರುವುದಕ್ಕೆ ಕಾರಣಗಳನ್ನು ಸಹ ಪ್ರಕಟಿಸಬೇಕು. ಇದರಿಂದ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಲು ಮತದಾರರಿಗೆ ಮಾಹಿತಿ ನೀಡಿದಂತಾಗುತ್ತದೆ ಎಂದೂ ಆಯೋಗ ಹೇಳಿದೆ.</p>.<p>ಬಿಹಾರ ವಿಧಾನಸಭೆಗೆ ಅಕ್ಟೋಬರ್ 28ರಿಂದ ಮೂರು ಹಂತದಲ್ಲಿ ಚುನಾವಣೆ ನಡೆಯಲಿದೆ.ಆಯೋಗ ಇಂಥ ಸೂಚನೆ ನೀಡಿದ ನಂತರ ನಡೆಯುವ ಮೊದಲ ಚುನಾವಣೆಯೂ ಇದಾಗಲಿದೆ.</p>.<p>ಅಷ್ಟೇ ಅಲ್ಲ, ಕ್ರಿಮಿನಲ್ ಹಿನ್ನೆಲೆ ಹೊಂದಿರದ ವ್ಯಕ್ತಿಗಳನ್ನು ಏಕೆ ಸ್ಪರ್ಧಾಕಣಕ್ಕೆ ಇಳಿಸಲಿಲ್ಲ ಎಂಬ ಬಗ್ಗೆಯೂ ಎಲ್ಲ ರಾಜಕೀಯ ಪಕ್ಷಗಳು ವಿವರಣೆ ನೀಡಬೇಕು.</p>.<p>‘ಗೆಲ್ಲುವ ಸಾಮರ್ಥ್ಯವೊಂದೇಅಭ್ಯರ್ಥಿಯ ಆಯ್ಕೆಗೆ ಮಾನದಂಡವಾಗಬಾರದು. ಅಭ್ಯರ್ಥಿಯ ಶಿಕ್ಷಣ, ಸಾಧನೆ ಹಾಗೂ ಪ್ರತಿಭೆಯೇ ಮುಖ್ಯವಾಗಬೇಕು ಎಂಬುದೇ ಇಂತಹ ನಿರ್ದೇಶನಕ್ಕೆ ಕಾರಣ’ ಎಂದು ಆಯೋಗ ಸ್ಪಷ್ಟಪಡಿಸಿದೆ.</p>.<p>‘ತನ್ನ ಅಭ್ಯರ್ಥಿಗಳ ಕುರಿತ ವಿವರಗಳನ್ನು ರಾಷ್ಟ್ರೀಯ ಹಾಗೂ ಸ್ಥಳೀಯ ಭಾಷೆಯ ಪತ್ರಿಕೆಯಲ್ಲಿಯೂ ಪ್ರಕಟಿಸಬೇಕು. ಪಕ್ಷವು ಖಾತೆ ಹೊಂದಿರುವ ಫೇಸ್ಬುಕ್, ಟ್ವಿಟರ್ನಂತಹ ಸಾಮಾಜಿಕ ಮಾಧ್ಯಮದ ವೇದಿಕೆಗಳ ಮೂಲಕವೂ ಪ್ರಚುರಪಡಿಸಬೇಕು‘ ಎಂದು ಆಯೋಗ ಹೇಳಿದೆ.</p>.<p>ಅಭ್ಯರ್ಥಿಗಳ ವಿರುದ್ಧ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಕುರಿತ ಮಾಹಿತಿಯನ್ನು ಬಹಿರಂಗಪಡಿಸುವುದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ಕಳೆದ ಫೆಬ್ರುವರಿಯಲ್ಲಿ ಆಯೋಗಕ್ಕೆ ನಿರ್ದೇಶನ ನೀಡಿತ್ತು. ಈ ನಿರ್ದೇಶನದಂತೆ ಎಲ್ಲ ರಾಜಕೀಯ ಪಕ್ಷಗಳಿಗೆ ಸೂಚನೆ ನೀಡಿದ್ದ ಆಯೋಗ, ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಗಳನ್ನು ಕಣಕ್ಕಿಳಿಸಲು ಆಯ್ಕೆ ಮಾಡಿರುವುದಕ್ಕೆ ಕಾರಣ ನೀಡುವಂತೆ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ರಾಜಕೀಯ ಪಕ್ಷಗಳು ತಾವು ಕಣಕ್ಕಿಳಿಸುವ ಅಭ್ಯರ್ಥಿಗಳ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಕುರಿತ ಮಾಹಿತಿಯನ್ನು ಪಕ್ಷದ ವೆಬ್ಸೈಟ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಚುನಾವಣಾ ಆಯೋಗ ಶುಕ್ರವಾರ ಸೂಚಿಸಿದೆ.</p>.<p>ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ದಿಷ್ಟ ವ್ಯಕ್ತಿಯನ್ನು ಆಯ್ಕೆ ಮಾಡಿರುವುದಕ್ಕೆ ಕಾರಣಗಳನ್ನು ಸಹ ಪ್ರಕಟಿಸಬೇಕು. ಇದರಿಂದ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಲು ಮತದಾರರಿಗೆ ಮಾಹಿತಿ ನೀಡಿದಂತಾಗುತ್ತದೆ ಎಂದೂ ಆಯೋಗ ಹೇಳಿದೆ.</p>.<p>ಬಿಹಾರ ವಿಧಾನಸಭೆಗೆ ಅಕ್ಟೋಬರ್ 28ರಿಂದ ಮೂರು ಹಂತದಲ್ಲಿ ಚುನಾವಣೆ ನಡೆಯಲಿದೆ.ಆಯೋಗ ಇಂಥ ಸೂಚನೆ ನೀಡಿದ ನಂತರ ನಡೆಯುವ ಮೊದಲ ಚುನಾವಣೆಯೂ ಇದಾಗಲಿದೆ.</p>.<p>ಅಷ್ಟೇ ಅಲ್ಲ, ಕ್ರಿಮಿನಲ್ ಹಿನ್ನೆಲೆ ಹೊಂದಿರದ ವ್ಯಕ್ತಿಗಳನ್ನು ಏಕೆ ಸ್ಪರ್ಧಾಕಣಕ್ಕೆ ಇಳಿಸಲಿಲ್ಲ ಎಂಬ ಬಗ್ಗೆಯೂ ಎಲ್ಲ ರಾಜಕೀಯ ಪಕ್ಷಗಳು ವಿವರಣೆ ನೀಡಬೇಕು.</p>.<p>‘ಗೆಲ್ಲುವ ಸಾಮರ್ಥ್ಯವೊಂದೇಅಭ್ಯರ್ಥಿಯ ಆಯ್ಕೆಗೆ ಮಾನದಂಡವಾಗಬಾರದು. ಅಭ್ಯರ್ಥಿಯ ಶಿಕ್ಷಣ, ಸಾಧನೆ ಹಾಗೂ ಪ್ರತಿಭೆಯೇ ಮುಖ್ಯವಾಗಬೇಕು ಎಂಬುದೇ ಇಂತಹ ನಿರ್ದೇಶನಕ್ಕೆ ಕಾರಣ’ ಎಂದು ಆಯೋಗ ಸ್ಪಷ್ಟಪಡಿಸಿದೆ.</p>.<p>‘ತನ್ನ ಅಭ್ಯರ್ಥಿಗಳ ಕುರಿತ ವಿವರಗಳನ್ನು ರಾಷ್ಟ್ರೀಯ ಹಾಗೂ ಸ್ಥಳೀಯ ಭಾಷೆಯ ಪತ್ರಿಕೆಯಲ್ಲಿಯೂ ಪ್ರಕಟಿಸಬೇಕು. ಪಕ್ಷವು ಖಾತೆ ಹೊಂದಿರುವ ಫೇಸ್ಬುಕ್, ಟ್ವಿಟರ್ನಂತಹ ಸಾಮಾಜಿಕ ಮಾಧ್ಯಮದ ವೇದಿಕೆಗಳ ಮೂಲಕವೂ ಪ್ರಚುರಪಡಿಸಬೇಕು‘ ಎಂದು ಆಯೋಗ ಹೇಳಿದೆ.</p>.<p>ಅಭ್ಯರ್ಥಿಗಳ ವಿರುದ್ಧ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಕುರಿತ ಮಾಹಿತಿಯನ್ನು ಬಹಿರಂಗಪಡಿಸುವುದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ಕಳೆದ ಫೆಬ್ರುವರಿಯಲ್ಲಿ ಆಯೋಗಕ್ಕೆ ನಿರ್ದೇಶನ ನೀಡಿತ್ತು. ಈ ನಿರ್ದೇಶನದಂತೆ ಎಲ್ಲ ರಾಜಕೀಯ ಪಕ್ಷಗಳಿಗೆ ಸೂಚನೆ ನೀಡಿದ್ದ ಆಯೋಗ, ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಗಳನ್ನು ಕಣಕ್ಕಿಳಿಸಲು ಆಯ್ಕೆ ಮಾಡಿರುವುದಕ್ಕೆ ಕಾರಣ ನೀಡುವಂತೆ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>