ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉ.ಪ್ರದೇಶ: ಪಕ್ಷದ ಎಲ್ಲ ಘಟಕಗಳನ್ನು ವಿಸರ್ಜಿಸಿದ ಅಖಿಲೇಶ್ ಯಾದವ್

Last Updated 3 ಜುಲೈ 2022, 9:11 IST
ಅಕ್ಷರ ಗಾತ್ರ

ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್, ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಎಲ್ಲ ಘಟಕಗಳನ್ನು ಭಾನುವಾರ ವಿಸರ್ಜಿಸಿದ್ದಾರೆ.

ಯುವ, ಮಹಿಳಾ ವಿಭಾಗ ಸೇರಿದಂತೆ ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ಘಟಕಗಳನ್ನು ವಿಸರ್ಜಿಸಿದ್ದಾರೆ.

ಈ ವಿಸರ್ಜನೆಗೆ ಕಾರಣವನ್ನು ತಿಳಿಸಿಲ್ಲ. ಇತ್ತೀಚೆಗೆ ನಡೆದ ರಾಂಪುರ, ಅಜಂಗಢ ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.

ಹಾಗಿದ್ದರೂ ಉತ್ತರ ಪ್ರದೇಶ ಘಟಕದ ಅಧ್ಯಕ್ಷ ನರೇಶ್ ಉತ್ತಮ್ ಅವರು ತಮ್ಮ ಸ್ಥಾನದಲ್ಲಿ ಮುಂದುವರಿಯುತ್ತಾರೆ ಎಂದು ಪಕ್ಷವು ಹೇಳಿದೆ.

2024ರ ಲೋಕಸಭೆ ಚುನಾವಣೆಗೆ ಪಕ್ಷವು ಸಜ್ಜಾಗುತ್ತಿದ್ದು, ಬಿಜೆಪಿಯನ್ನು ಎದುರಿಸಲು ಸಂಘಟನೆ ಬಲಪಡಿಸುವುದರತ್ತ ಗಮನ ಹರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT