‘ಕೆಲವು ರಾಷ್ಟ್ರೀಯ ಪಕ್ಷಗಳು ತಮಿಳುನಾಡಿನಲ್ಲಿ ಅಧಿಕಾರದ ಗದ್ದುಗೆ ಏರಲು ಹವಣಿಸುತ್ತಿವೆ. ಕಳೆದ 50 ವರ್ಷಗಳ ಕಾಲ ದ್ರಾವಿಡ ಪಕ್ಷಗಳು ರಾಜ್ಯವನ್ನಾಳಿವೆ. ಆದರೆ, ಹಿರಿಯರಾದ ಎಂ.ಕರುಣಾನಿಧಿ, ಜೆ.ಜಯಲಲಿತಾ ಅವರ ನಿಧನದ ನಂತರ ದ್ರಾವಿಡ ಪಕ್ಷಗಳಿಗೆ ಅಪಕೀರ್ತಿ ತರಲು ಈ ಕೆಲವು ರಾಷ್ಟ್ರೀಯ ಪಕ್ಷಗಳು ಯತ್ನಿಸುತ್ತಿವೆ’ ಎಂದು ಮುನಿಸ್ವಾಮಿ ಅವರು ಬಿಜೆಪಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.