ಇದೇ ವೇಳೆ, ತಮ್ಮನ್ನು ಕ್ರಿಕೆಟಿಗ ಎಂದು ಲೇವಡಿ ಮಾಡಿದ್ದ ನಿತೀಶ್ ವಿರುದ್ಧ ಹರಿಹಾಯ್ದಿರುವ ತೇಜಸ್ವಿ ಯಾದವ್, 'ನಿತೀಶ್ ಕುಮಾರ್ ಅವರಿಗೆ ಏನಾಗಿದೆ? ಅಂತಹ ಅನುಭವಿ ರಾಜಕಾರಣಿಯಾಗಿರುವ ಅವರು ಈ ರೀತಿಯಲ್ಲಿ ಏಕೆ ಮಾತನಾಡುತ್ತಾರೆ? ಕ್ರಿಕೆಟ್ ಮತ್ತು ಚಲನಚಿತ್ರಗಳಿಂದ ನಾವು ರಾಜಕೀಯಕ್ಕೆ ಬರಲು ಸಾಧ್ಯವಿಲ್ಲವೇ? ವೈದ್ಯರು, ಎಂಜಿನಿಯರ್ಗಳೂ ಸಹ ರಾಜಕಾರಣಕ್ಕೆ ಬರಲು ಸಾಧ್ಯವಿಲ್ಲ ಎಂಬುದಾಗಿ ಅವರ ಮಾತಿನ ಅರ್ಥವೇ?' ಎಂದು ಅವರು ಪ್ರಶ್ನಿಸಿದ್ದಾರೆ.