<p class="title"><strong>ಭುವನೇಶ್ವರ:</strong> ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಜೀವಬೆದರಿಕೆ ಇರುವ ಕುರಿತು ಅನಾಮಧೇಯ ವ್ಯಕ್ತಿಯೊಬ್ಬರು ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಅವರಿಗೆ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಿದೆ.</p>.<p class="title">ಮುಖ್ಯಮಂತ್ರಿ ಅವರ ಹತ್ಯೆಗೆ ಸಂಚು ನಡೆದಿದೆ ಎಂದು ಶಂಕಿಸಿರುವ ಸರ್ಕಾರ, ಅನಾಮಧೇಯ ಪತ್ರ ಕುರಿತಂತೆ ತನಿಖೆಗೆ ಆದೇಶಿಸಿದೆ.</p>.<p class="title">ಅನಾಮಧೇಯ ಪತ್ರ ಇಂಗ್ಲಿಷ್ನಲ್ಲಿದ್ದು, ‘ಆತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಗುತ್ತಿಗೆ ಹತ್ಯೆಗಾರರು ದಾಳಿ ನಡೆಸುವರು’ ಎಂದು ತಿಳಿಸಲಾಗಿದೆ.</p>.<p>‘ಗುತ್ತಿಗೆ ಕೊಲೆಗಾರರು ನಿಮ್ಮ ಮೇಲೆ ದಾಳಿ ನಡೆಸಲಿದ್ದಾರೆ ಎಂದು ತಿಳಿಸಲು ಬಯಸುತ್ತೇನೆ. ಇವರು ವೃತ್ತಿಪರ ಹತ್ಯೆಗಾರರು. ಅವರ ಬಳಿಕ ಎಕೆ–47, ಸೆಮಿ ಆಟೊಮ್ಯಾಟಿಕ್ ಪಿಸ್ತೂಲು ಸೇರಿದಂತೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿವೆ. ಅವರು ಯಾವುದೇ ಸಂದರ್ಭದಲ್ಲಿ ದಾಳಿ ನಡೆಸಬಹುದು, ಜಾಗೃತರಾಗಿರಿ’ ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.</p>.<p>‘ಪಿತೂರಿಯ ಮಾಸ್ಟರ್ ಮೈಂಡ್ ನಾಗಪುರದಲ್ಲಿ ವಾಸಿಸುತ್ತಿದ್ದಾರೆ’ ಎಂದೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಭುವನೇಶ್ವರ:</strong> ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಜೀವಬೆದರಿಕೆ ಇರುವ ಕುರಿತು ಅನಾಮಧೇಯ ವ್ಯಕ್ತಿಯೊಬ್ಬರು ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಅವರಿಗೆ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಿದೆ.</p>.<p class="title">ಮುಖ್ಯಮಂತ್ರಿ ಅವರ ಹತ್ಯೆಗೆ ಸಂಚು ನಡೆದಿದೆ ಎಂದು ಶಂಕಿಸಿರುವ ಸರ್ಕಾರ, ಅನಾಮಧೇಯ ಪತ್ರ ಕುರಿತಂತೆ ತನಿಖೆಗೆ ಆದೇಶಿಸಿದೆ.</p>.<p class="title">ಅನಾಮಧೇಯ ಪತ್ರ ಇಂಗ್ಲಿಷ್ನಲ್ಲಿದ್ದು, ‘ಆತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಗುತ್ತಿಗೆ ಹತ್ಯೆಗಾರರು ದಾಳಿ ನಡೆಸುವರು’ ಎಂದು ತಿಳಿಸಲಾಗಿದೆ.</p>.<p>‘ಗುತ್ತಿಗೆ ಕೊಲೆಗಾರರು ನಿಮ್ಮ ಮೇಲೆ ದಾಳಿ ನಡೆಸಲಿದ್ದಾರೆ ಎಂದು ತಿಳಿಸಲು ಬಯಸುತ್ತೇನೆ. ಇವರು ವೃತ್ತಿಪರ ಹತ್ಯೆಗಾರರು. ಅವರ ಬಳಿಕ ಎಕೆ–47, ಸೆಮಿ ಆಟೊಮ್ಯಾಟಿಕ್ ಪಿಸ್ತೂಲು ಸೇರಿದಂತೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿವೆ. ಅವರು ಯಾವುದೇ ಸಂದರ್ಭದಲ್ಲಿ ದಾಳಿ ನಡೆಸಬಹುದು, ಜಾಗೃತರಾಗಿರಿ’ ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.</p>.<p>‘ಪಿತೂರಿಯ ಮಾಸ್ಟರ್ ಮೈಂಡ್ ನಾಗಪುರದಲ್ಲಿ ವಾಸಿಸುತ್ತಿದ್ದಾರೆ’ ಎಂದೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>