<p><strong>ಮುಂಬೈ</strong>: ದೇವಾಲಯಗಳನ್ನು ತೆರೆಯುವ ವಿಚಾರದಲ್ಲಿ ರಾಜ್ಯಪಾಲ ಭಗತ್ಸಿಂಗ್ ಕೋಶಿಯಾರಿ ಹಾಗೂ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಡುವಿನ ಪತ್ರ ವ್ಯವಹಾರದ ಸುತ್ತಲಿನ ಬೆಳವಣಿಗೆಗಳನ್ನು ಉಲ್ಲೇಖಿಸಿ ಮಾತನಾಡಿದ ಎನ್ಸಿಪಿ ಮುಖಂಡ ಶರದ್ ಪವಾರ್, ’ಸ್ವಾಭಿಮಾನ, ಆತ್ಮಗೌರವವಿರುವರು ಯಾರೂ ಆ ಹುದ್ದೆಯಲ್ಲಿ (ರಾಜ್ಯಪಾಲ) ಮುಂದುವರಿಯುತ್ತಿರಲಿಲ್ಲ’ ಎಂದು ಹೇಳಿದರು.</p>.<p>ದೇವಾಲಯಗಳನ್ನು ತೆರೆಯ ವಿಚಾರದಲ್ಲಿ ರಾಜ್ಯಪಾಲರು, ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ ’ಶಿವಸೇನಾ ಇದ್ದಕ್ಕಿದ್ದಂತೆ ಜಾತ್ಯತೀತವಾಗಿ ಬದಲಾಯಿತಾ’ ಎಂದು ಉಲ್ಲೇಖಿಸಿದ್ದರು. ಈ ಬೆಳವಣಿಗೆ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಸುದ್ದಿವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ರಾಜ್ಯಪಾಲರು ಪತ್ರದಲ್ಲಿ ಬಳಸಿದ ಭಾಷೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.</p>.<p>’ಪತ್ರದಲ್ಲಿ ಬಳಸಿರುವ ಭಾಷೆ ಬಗ್ಗೆಕೇಂದ್ರ ಸಚಿವರು ಅಸಮಾಧಾನ ವ್ಯಕ್ತಪಡಿಸಿದ ನಂತರ ಸ್ವಾಭಿಮಾನಿ ಇರುವ ಯಾರೂ ಈ ಹುದ್ದೆಯಲ್ಲಿ ಮುಂದುವರಿಯಬೇಕೇ, ಬೇಡವೇ ಎಂಬುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಿದ್ದರು’ ಎಂದು ಶರದ್ಪವಾರ್, ಭಗತ್ಸಿಂಗ್ ಅವರ ಹೆಸರು ಪ್ರಸ್ತಾಪಿಸಿದೇ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಉಸ್ಮಾನಾಬಾದ್ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಪತ್ರದಲ್ಲಿ ಕೆಲವು ಪದಗಳ ಬಳಕೆಯನ್ನು ತಪ್ಪಿಸಬಹುದಿತ್ತು ಎಂದು ಅಮಿತ್ ಶಾ ಹೇಳಿದ್ದಾರೆ. ಇಂಥ ಹೇಳಿಕೆ ನಂತರವೂ ಸ್ವಾಭಿಮಾನ ಇರುವ ಯಾವ ವ್ಯಕ್ತಿಯೂ ಆ ಹುದ್ದೆಯಲ್ಲಿ ಮುಂದುವರಿಯುತ್ತಿರಲಿಲ್ಲ’ ಎಂದು ಪುನರುಚ್ಛರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ದೇವಾಲಯಗಳನ್ನು ತೆರೆಯುವ ವಿಚಾರದಲ್ಲಿ ರಾಜ್ಯಪಾಲ ಭಗತ್ಸಿಂಗ್ ಕೋಶಿಯಾರಿ ಹಾಗೂ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಡುವಿನ ಪತ್ರ ವ್ಯವಹಾರದ ಸುತ್ತಲಿನ ಬೆಳವಣಿಗೆಗಳನ್ನು ಉಲ್ಲೇಖಿಸಿ ಮಾತನಾಡಿದ ಎನ್ಸಿಪಿ ಮುಖಂಡ ಶರದ್ ಪವಾರ್, ’ಸ್ವಾಭಿಮಾನ, ಆತ್ಮಗೌರವವಿರುವರು ಯಾರೂ ಆ ಹುದ್ದೆಯಲ್ಲಿ (ರಾಜ್ಯಪಾಲ) ಮುಂದುವರಿಯುತ್ತಿರಲಿಲ್ಲ’ ಎಂದು ಹೇಳಿದರು.</p>.<p>ದೇವಾಲಯಗಳನ್ನು ತೆರೆಯ ವಿಚಾರದಲ್ಲಿ ರಾಜ್ಯಪಾಲರು, ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ ’ಶಿವಸೇನಾ ಇದ್ದಕ್ಕಿದ್ದಂತೆ ಜಾತ್ಯತೀತವಾಗಿ ಬದಲಾಯಿತಾ’ ಎಂದು ಉಲ್ಲೇಖಿಸಿದ್ದರು. ಈ ಬೆಳವಣಿಗೆ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಸುದ್ದಿವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ರಾಜ್ಯಪಾಲರು ಪತ್ರದಲ್ಲಿ ಬಳಸಿದ ಭಾಷೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.</p>.<p>’ಪತ್ರದಲ್ಲಿ ಬಳಸಿರುವ ಭಾಷೆ ಬಗ್ಗೆಕೇಂದ್ರ ಸಚಿವರು ಅಸಮಾಧಾನ ವ್ಯಕ್ತಪಡಿಸಿದ ನಂತರ ಸ್ವಾಭಿಮಾನಿ ಇರುವ ಯಾರೂ ಈ ಹುದ್ದೆಯಲ್ಲಿ ಮುಂದುವರಿಯಬೇಕೇ, ಬೇಡವೇ ಎಂಬುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಿದ್ದರು’ ಎಂದು ಶರದ್ಪವಾರ್, ಭಗತ್ಸಿಂಗ್ ಅವರ ಹೆಸರು ಪ್ರಸ್ತಾಪಿಸಿದೇ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಉಸ್ಮಾನಾಬಾದ್ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಪತ್ರದಲ್ಲಿ ಕೆಲವು ಪದಗಳ ಬಳಕೆಯನ್ನು ತಪ್ಪಿಸಬಹುದಿತ್ತು ಎಂದು ಅಮಿತ್ ಶಾ ಹೇಳಿದ್ದಾರೆ. ಇಂಥ ಹೇಳಿಕೆ ನಂತರವೂ ಸ್ವಾಭಿಮಾನ ಇರುವ ಯಾವ ವ್ಯಕ್ತಿಯೂ ಆ ಹುದ್ದೆಯಲ್ಲಿ ಮುಂದುವರಿಯುತ್ತಿರಲಿಲ್ಲ’ ಎಂದು ಪುನರುಚ್ಛರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>