<p><strong>ನವದೆಹಲಿ: </strong>‘ಕೊರೊನಾ ವೈರಸ್ ಮತ್ತೆ ದಾಳಿ ಮಾಡಲಿದೆ. ಹೀಗಾಗಿ,ಈ ವೈರಸ್ ದಾಳಿಯನ್ನು ಎದುರಿಸಲು ರಾಜ್ಯಗಳ ನಡುವಿನ ಸಮನ್ವಯದೊಂದಿಗೆ ರಾಷ್ಟ್ರ ಮಟ್ಟದಲ್ಲಿ ಸಿದ್ಧತೆ ಮಾಡಿಕೊಳ್ಳುವುದು ಅಗತ್ಯ’ ಎಂದು ನೀತಿ ಆಯೋಗದ ಆರೋಗ್ಯ ವಿಭಾಗದ ಸದಸ್ಯ ಡಾ.ವಿ.ಕೆ.ಪೌಲ್ ಗುರುವಾರ ಹೇಳಿದರು.</p>.<p>‘ಕೋವಿಡ್–19 ರೋಗಿಗಳ ಚಿಕಿತ್ಸೆಗಾಗಿ ಮೂಲಸೌಕರ್ಯಗಳನ್ನು ಹೆಚ್ಚಿಸಬೇಕು, ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸಲು ಕಠಿಣ ನಿರ್ಬಂಧಗಳನ್ನು ಅನುಸರಿಸಬೇಕು’ ಎಂದೂ ಅವರು ಹೇಳಿದ್ದಾರೆ.</p>.<p>ಕೋವಿಡ್ನ ಎರಡನೇ ಅಲೆ ಬಾಧಿಸುವುದನ್ನು ಅರಿಯುವಲ್ಲಿ ಸರ್ಕಾರ ವಿಫಲವಾಯಿತು ಎಂಬ ಆರೋಪಗಳನ್ನು ತಳ್ಳಿ ಹಾಕಿದ ಅವರು, ‘ಕೋವಿಡ್–19ನ ಎರಡನೇ ಅಲೆಯ ಬಗ್ಗೆ ವಿವಿಧ ವೇದಿಕೆಗಳ ಮೂಲಕ ಸರ್ಕಾರ ಪದೇಪದೇ ಎಚ್ಚರಿಸುತ್ತಲೇ ಬಂದಿದೆ’ ಎಂದರು.</p>.<p>‘ದೇಶದ ಶೇ 80ರಷ್ಟು ಜನರ ಇನ್ನೂ ಸೋಂಕಿಗೆ ಒಳಗಾಗುವ ಅಪಾಯ ಎದುರಿಸುತ್ತಿದ್ದಾರೆ. ಸೋಂಕು ದೃಢ ಪ್ರಮಾಣ ಶೇ 20ರಷ್ಟಿದೆ ಎಂದು ಈ ಹಿಂದೆಯೇ ಎಚ್ಚರಿಕೆ ನೀಡಲಾಗಿತ್ತು’ ಎಂದೂ ಅವರು ಹೇಳಿದರು.</p>.<p><strong>ಸೋಂಕಿತರ ಪ್ರಮಾಣ ಇಳಿಮುಖ<br />ನವದೆಹಲಿ:</strong> ಕಳೆದ ಒಂದು ತಿಂಗಳಿಂದ ಸಾರ್ವಜನಿಕರ ಆತಂಕ ಹೆಚ್ಚಿಸಿದ್ದ ಕೋವಿಡ್ ಎರಡನೇ ಅಲೆಯು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿಯಂತ್ರಣಕ್ಕೆ ಬರುತ್ತಿದೆ. ಗುರುವಾರ ಕೊರೊನಾ ಸೋಂಕು ದೃಢಪಟ್ಟವರ ಪ್ರಮಾಣದಲ್ಲಿ ಭಾರಿ ಪ್ರಮಾಣದ ಇಳಿಕೆ ಕಂಡುಬಂದಿದೆ.</p>.<p>ಸತತ 4ನೇ ವಾರ ಲಾಕ್ಡೌನ್ ಮುಂದುವರಿದಿರುವ ಪರಿಣಾಮ ಸೋಂಕಿತರ ಶೇಕಡಾವಾರು ಪ್ರಮಾಣ ಇದೇ ಮೊದಲ ಬಾರಿಗೆ 15ಕ್ಕಿಂತ ಕಡಿಮೆ ದಾಖಲಾಗಿದೆ.</p>.<p>ಸತತ 6 ದಿನಗಳಿಂದ ಸೋಂಕಿತರ ಸಂಖ್ಯೆ ಕಡಿಮೆಯಾಗಿ, ಗುಣಮುಖರಾದವರ ಸಂಖ್ಯೆ ಹೆಚ್ಚುತ್ತಾ ಸಾಗಿರುವುದು ಆತಂಕ<br />ವನ್ನು ಕೊಂಚ ಕಡಿಮೆ ಮಾಡಿದೆ.</p>.<p>**</p>.<p><strong>100 ಜಿಲ್ಲಾಧಿಕಾರಿಗಳ ಜೊತೆ ಚರ್ಚೆ<br />ನವದೆಹಲಿ (ಪಿಟಿಐ):</strong> ದೇಶದಾದ್ಯಂತ ಅತ್ಯಧಿಕ ಕೋವಿಡ್ ಪ್ರಕರಣಗಳು ದಾಖಲಾಗುತ್ತಿರುವ 100 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮೇ 18, 20ರಂದು ಸಮಾಲೋಚಿಸುವರು.</p>.<p>ಸರ್ಕಾರದ ಮೂಲಗಳ ಪ್ರಕಾರ, ಮೊದಲ ದಿನ 9 ರಾಜ್ಯಗಳ 46 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎರಡನೇ ದಿನ 10 ರಾಜ್ಯಗಳ 54 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಪ್ರಧಾನಿ ಚರ್ಚಿಸಲಿದ್ದಾರೆ. ಸಂವಹನದ ವೇಳೆ ಆಯಾ ರಾಜ್ಯಗಳ ಮುಖ್ಯಮಂತ್ರಿ ಕೂಡಾ ಭಾಗವಹಿಸುವರು.</p>.<p>ಕೋವಿಡ್ ಪರಿಸ್ಥಿತಿ ಗಂಭೀರವಾದ ಬಳಿಕ ಪ್ರಧಾನಿ ಹೀಗೆ ಜಿಲ್ಲಾ ಹಂತದಲ್ಲಿ ಆಡಳಿತ ಅಧಿಕಾರಿಗಳ ಜೊತೆಗೆ ಚರ್ಚಿಸುತ್ತಿರುವುದು ಇದೇ ಮೊದಲು. ಇದುವರೆಗೂ ಮುಖ್ಯಮಂತ್ರಿಗಳ ಜೊತೆಗೆ ವಿವಿಧ ಸಭೆ ನಡೆಸಿದ್ದಾರೆ.</p>.<p>ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಶೇ 72ರಷ್ಟು ಹೊಸ ಸೋಂಕು ಪ್ರಕರಣಗಳು, ಶೇ 74.30ರಷ್ಟು ಸಾವಿನ ಪ್ರಕರಣಗಳು 10 ರಾಜ್ಯಗಳಲ್ಲಿ ದಾಖಲಾಗುತ್ತಿವೆ. ಈ ರಾಜ್ಯಗಳು– ಮಹಾರಾಷ್ಟ್ರ, ದೆಹಲಿ, ಹರಿಯಾಣ, ಉತ್ತರ ಪ್ರದೇಶ, ಕೇರಳ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ರಾಜಸ್ಥಾನ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ಕೊರೊನಾ ವೈರಸ್ ಮತ್ತೆ ದಾಳಿ ಮಾಡಲಿದೆ. ಹೀಗಾಗಿ,ಈ ವೈರಸ್ ದಾಳಿಯನ್ನು ಎದುರಿಸಲು ರಾಜ್ಯಗಳ ನಡುವಿನ ಸಮನ್ವಯದೊಂದಿಗೆ ರಾಷ್ಟ್ರ ಮಟ್ಟದಲ್ಲಿ ಸಿದ್ಧತೆ ಮಾಡಿಕೊಳ್ಳುವುದು ಅಗತ್ಯ’ ಎಂದು ನೀತಿ ಆಯೋಗದ ಆರೋಗ್ಯ ವಿಭಾಗದ ಸದಸ್ಯ ಡಾ.ವಿ.ಕೆ.ಪೌಲ್ ಗುರುವಾರ ಹೇಳಿದರು.</p>.<p>‘ಕೋವಿಡ್–19 ರೋಗಿಗಳ ಚಿಕಿತ್ಸೆಗಾಗಿ ಮೂಲಸೌಕರ್ಯಗಳನ್ನು ಹೆಚ್ಚಿಸಬೇಕು, ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸಲು ಕಠಿಣ ನಿರ್ಬಂಧಗಳನ್ನು ಅನುಸರಿಸಬೇಕು’ ಎಂದೂ ಅವರು ಹೇಳಿದ್ದಾರೆ.</p>.<p>ಕೋವಿಡ್ನ ಎರಡನೇ ಅಲೆ ಬಾಧಿಸುವುದನ್ನು ಅರಿಯುವಲ್ಲಿ ಸರ್ಕಾರ ವಿಫಲವಾಯಿತು ಎಂಬ ಆರೋಪಗಳನ್ನು ತಳ್ಳಿ ಹಾಕಿದ ಅವರು, ‘ಕೋವಿಡ್–19ನ ಎರಡನೇ ಅಲೆಯ ಬಗ್ಗೆ ವಿವಿಧ ವೇದಿಕೆಗಳ ಮೂಲಕ ಸರ್ಕಾರ ಪದೇಪದೇ ಎಚ್ಚರಿಸುತ್ತಲೇ ಬಂದಿದೆ’ ಎಂದರು.</p>.<p>‘ದೇಶದ ಶೇ 80ರಷ್ಟು ಜನರ ಇನ್ನೂ ಸೋಂಕಿಗೆ ಒಳಗಾಗುವ ಅಪಾಯ ಎದುರಿಸುತ್ತಿದ್ದಾರೆ. ಸೋಂಕು ದೃಢ ಪ್ರಮಾಣ ಶೇ 20ರಷ್ಟಿದೆ ಎಂದು ಈ ಹಿಂದೆಯೇ ಎಚ್ಚರಿಕೆ ನೀಡಲಾಗಿತ್ತು’ ಎಂದೂ ಅವರು ಹೇಳಿದರು.</p>.<p><strong>ಸೋಂಕಿತರ ಪ್ರಮಾಣ ಇಳಿಮುಖ<br />ನವದೆಹಲಿ:</strong> ಕಳೆದ ಒಂದು ತಿಂಗಳಿಂದ ಸಾರ್ವಜನಿಕರ ಆತಂಕ ಹೆಚ್ಚಿಸಿದ್ದ ಕೋವಿಡ್ ಎರಡನೇ ಅಲೆಯು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿಯಂತ್ರಣಕ್ಕೆ ಬರುತ್ತಿದೆ. ಗುರುವಾರ ಕೊರೊನಾ ಸೋಂಕು ದೃಢಪಟ್ಟವರ ಪ್ರಮಾಣದಲ್ಲಿ ಭಾರಿ ಪ್ರಮಾಣದ ಇಳಿಕೆ ಕಂಡುಬಂದಿದೆ.</p>.<p>ಸತತ 4ನೇ ವಾರ ಲಾಕ್ಡೌನ್ ಮುಂದುವರಿದಿರುವ ಪರಿಣಾಮ ಸೋಂಕಿತರ ಶೇಕಡಾವಾರು ಪ್ರಮಾಣ ಇದೇ ಮೊದಲ ಬಾರಿಗೆ 15ಕ್ಕಿಂತ ಕಡಿಮೆ ದಾಖಲಾಗಿದೆ.</p>.<p>ಸತತ 6 ದಿನಗಳಿಂದ ಸೋಂಕಿತರ ಸಂಖ್ಯೆ ಕಡಿಮೆಯಾಗಿ, ಗುಣಮುಖರಾದವರ ಸಂಖ್ಯೆ ಹೆಚ್ಚುತ್ತಾ ಸಾಗಿರುವುದು ಆತಂಕ<br />ವನ್ನು ಕೊಂಚ ಕಡಿಮೆ ಮಾಡಿದೆ.</p>.<p>**</p>.<p><strong>100 ಜಿಲ್ಲಾಧಿಕಾರಿಗಳ ಜೊತೆ ಚರ್ಚೆ<br />ನವದೆಹಲಿ (ಪಿಟಿಐ):</strong> ದೇಶದಾದ್ಯಂತ ಅತ್ಯಧಿಕ ಕೋವಿಡ್ ಪ್ರಕರಣಗಳು ದಾಖಲಾಗುತ್ತಿರುವ 100 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮೇ 18, 20ರಂದು ಸಮಾಲೋಚಿಸುವರು.</p>.<p>ಸರ್ಕಾರದ ಮೂಲಗಳ ಪ್ರಕಾರ, ಮೊದಲ ದಿನ 9 ರಾಜ್ಯಗಳ 46 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎರಡನೇ ದಿನ 10 ರಾಜ್ಯಗಳ 54 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಪ್ರಧಾನಿ ಚರ್ಚಿಸಲಿದ್ದಾರೆ. ಸಂವಹನದ ವೇಳೆ ಆಯಾ ರಾಜ್ಯಗಳ ಮುಖ್ಯಮಂತ್ರಿ ಕೂಡಾ ಭಾಗವಹಿಸುವರು.</p>.<p>ಕೋವಿಡ್ ಪರಿಸ್ಥಿತಿ ಗಂಭೀರವಾದ ಬಳಿಕ ಪ್ರಧಾನಿ ಹೀಗೆ ಜಿಲ್ಲಾ ಹಂತದಲ್ಲಿ ಆಡಳಿತ ಅಧಿಕಾರಿಗಳ ಜೊತೆಗೆ ಚರ್ಚಿಸುತ್ತಿರುವುದು ಇದೇ ಮೊದಲು. ಇದುವರೆಗೂ ಮುಖ್ಯಮಂತ್ರಿಗಳ ಜೊತೆಗೆ ವಿವಿಧ ಸಭೆ ನಡೆಸಿದ್ದಾರೆ.</p>.<p>ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಶೇ 72ರಷ್ಟು ಹೊಸ ಸೋಂಕು ಪ್ರಕರಣಗಳು, ಶೇ 74.30ರಷ್ಟು ಸಾವಿನ ಪ್ರಕರಣಗಳು 10 ರಾಜ್ಯಗಳಲ್ಲಿ ದಾಖಲಾಗುತ್ತಿವೆ. ಈ ರಾಜ್ಯಗಳು– ಮಹಾರಾಷ್ಟ್ರ, ದೆಹಲಿ, ಹರಿಯಾಣ, ಉತ್ತರ ಪ್ರದೇಶ, ಕೇರಳ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ರಾಜಸ್ಥಾನ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>