<p><strong>ನವದೆಹಲಿ: </strong>ಪೆಗಾಸಸ್ ಕಣ್ಗಾವಲು ತಂತ್ರಾಂಶವನ್ನು ಬಳಸಿ ಪತ್ರಕರ್ತರು, ಸಾಮಾಜಿಕ ಹೋರಾಟಗಾರರ ಮೇಲೆ ಬೇಹುಗಾರಿಕೆ ನಡೆಸಿದ ವರದಿಗಳ ಬಗ್ಗೆ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಬೇಕು ಎಂದು ಕೋರಿ ರಾಜ್ಯಸಭಾ ಸದಸ್ಯ ಜಾನ್ ಬ್ರಿಟಾಸ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.</p>.<p>‘ಪೆಗಾಸಸ್ ಕಣ್ಗಾವಲು ತಂತ್ರಾಂಶವನ್ನು ಬಳಸಿ ರಾಜಕೀಯ ನಾಯಕರು, ಸಚಿವರು, ಸರ್ಕಾರಿ ಸಿಬ್ಬಂದಿ ಸೇರಿದಂತೆ ಸುಮಾರು 300 ಭಾರತೀಯರ ಮೇಲೆ ನಿಗಾ ಇರಿಸಲಾಗಿದೆ’ ಎಂದು ಮಾಧ್ಯಮಗಳು ವರದಿ ಮಾಡಿವೆ.</p>.<p>ಈ ಸಂಬಂಧ ಜಾನ್ ಬ್ರಿಟಾಸ್ ಅವರು ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.</p>.<p>‘ಇದು ಭಾರತೀಯರಲ್ಲಿ ಆತಂಕ ಮೂಡಿಸಿದೆ. ಅಲ್ಲದೆ ಈ ರೀತಿಯ ನಡೆಯಿಂದ ಜನರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟಾಗಬಹುದು. ಹಾಗಾಗಿ ಈ ಬಗ್ಗೆ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಬೇಕು’ ಎಂದು ಅವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.</p>.<p>‘ಈ ವಿಷಯ ಅತ್ಯಂತ ಗಂಭೀರ ಸ್ವರೂಪದ್ದಾಗಿದೆ. ಆದರೂ ಕೇಂದ್ರ ಸರ್ಕಾರವು ಈ ಬಗೆಗಿನ ತನಿಖೆ ಬಗ್ಗೆ ಕಾಳಜಿ ವಹಿಸಿಲ್ಲ. ಬದಲಿಗೆ ದೇಶದಲ್ಲಿ ಈ ರೀತಿಯ ಅನಧಿಕೃತ ಕಣ್ಗಾವಲು ಪ್ರಕ್ರಿಯೆಗಳು ನಡೆಯದಂತೆ ನಿಯಮಿತವಾಗಿ ಪರೀಕ್ಷಿಸಲಾಗುತ್ತದೆ. ಇದು ಪ್ರಜಾಪ್ರಭುತ್ವಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನವಾಗಿದೆ ಎಂಬುದಾಗಿ ಸರ್ಕಾರ ಹೇಳಿತು’ ಎಂದು ಜಾನ್ ಬ್ರಿಟಾಸ್ ಅವರು ಭಾನುವಾರ ತಿಳಿಸಿದರು.</p>.<p>‘ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲಾಯಿತು. ಆದರೆ, ಈ ಆರೋಪಗಳನ್ನು ಕೇಂದ್ರ ಸರ್ಕಾರ ನಿರಾಕರಿಸಿಯೂ ಇಲ್ಲ, ಒಪ್ಪಿಕೊಳ್ಳಲೂ ಇಲ್ಲ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪೆಗಾಸಸ್ ಕಣ್ಗಾವಲು ತಂತ್ರಾಂಶವನ್ನು ಬಳಸಿ ಪತ್ರಕರ್ತರು, ಸಾಮಾಜಿಕ ಹೋರಾಟಗಾರರ ಮೇಲೆ ಬೇಹುಗಾರಿಕೆ ನಡೆಸಿದ ವರದಿಗಳ ಬಗ್ಗೆ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಬೇಕು ಎಂದು ಕೋರಿ ರಾಜ್ಯಸಭಾ ಸದಸ್ಯ ಜಾನ್ ಬ್ರಿಟಾಸ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.</p>.<p>‘ಪೆಗಾಸಸ್ ಕಣ್ಗಾವಲು ತಂತ್ರಾಂಶವನ್ನು ಬಳಸಿ ರಾಜಕೀಯ ನಾಯಕರು, ಸಚಿವರು, ಸರ್ಕಾರಿ ಸಿಬ್ಬಂದಿ ಸೇರಿದಂತೆ ಸುಮಾರು 300 ಭಾರತೀಯರ ಮೇಲೆ ನಿಗಾ ಇರಿಸಲಾಗಿದೆ’ ಎಂದು ಮಾಧ್ಯಮಗಳು ವರದಿ ಮಾಡಿವೆ.</p>.<p>ಈ ಸಂಬಂಧ ಜಾನ್ ಬ್ರಿಟಾಸ್ ಅವರು ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.</p>.<p>‘ಇದು ಭಾರತೀಯರಲ್ಲಿ ಆತಂಕ ಮೂಡಿಸಿದೆ. ಅಲ್ಲದೆ ಈ ರೀತಿಯ ನಡೆಯಿಂದ ಜನರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟಾಗಬಹುದು. ಹಾಗಾಗಿ ಈ ಬಗ್ಗೆ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಬೇಕು’ ಎಂದು ಅವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.</p>.<p>‘ಈ ವಿಷಯ ಅತ್ಯಂತ ಗಂಭೀರ ಸ್ವರೂಪದ್ದಾಗಿದೆ. ಆದರೂ ಕೇಂದ್ರ ಸರ್ಕಾರವು ಈ ಬಗೆಗಿನ ತನಿಖೆ ಬಗ್ಗೆ ಕಾಳಜಿ ವಹಿಸಿಲ್ಲ. ಬದಲಿಗೆ ದೇಶದಲ್ಲಿ ಈ ರೀತಿಯ ಅನಧಿಕೃತ ಕಣ್ಗಾವಲು ಪ್ರಕ್ರಿಯೆಗಳು ನಡೆಯದಂತೆ ನಿಯಮಿತವಾಗಿ ಪರೀಕ್ಷಿಸಲಾಗುತ್ತದೆ. ಇದು ಪ್ರಜಾಪ್ರಭುತ್ವಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನವಾಗಿದೆ ಎಂಬುದಾಗಿ ಸರ್ಕಾರ ಹೇಳಿತು’ ಎಂದು ಜಾನ್ ಬ್ರಿಟಾಸ್ ಅವರು ಭಾನುವಾರ ತಿಳಿಸಿದರು.</p>.<p>‘ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲಾಯಿತು. ಆದರೆ, ಈ ಆರೋಪಗಳನ್ನು ಕೇಂದ್ರ ಸರ್ಕಾರ ನಿರಾಕರಿಸಿಯೂ ಇಲ್ಲ, ಒಪ್ಪಿಕೊಳ್ಳಲೂ ಇಲ್ಲ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>