ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಗಾಸಸ್‌: ಪ್ರತ್ಯೇಕ ಚರ್ಚೆ ಅಗತ್ಯವಿಲ್ಲ– ಜೋಶಿ

Last Updated 31 ಜನವರಿ 2022, 18:40 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):ಪೆಗಾಸಸ್ ವಿಷಯ ಕುರಿತು ಪ್ರತ್ಯೇಕ ಚರ್ಚೆ ಅಗತ್ಯವಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸೋಮವಾರ ಹೇಳಿದ್ದಾರೆ.

ಈ ಕುರಿತ ವಿಷಯವು ನ್ಯಾಯಾಂಗದ ಅಂಗಳದಲ್ಲಿ ಇರುವ ಕಾರಣ ಪ್ರತ್ಯೇಕವಾದ ಚರ್ಚೆಯ ಅಗತ್ಯವಿಲ್ಲ ಎಂದಿರುವ ಅವರು,ವಿರೋಧ ಪಕ್ಷಗಳು ಬಯಸಿದರೆ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಮಾತನಾಡುವಾಗ ಯಾವುದೇ ವಿಷಯವನ್ನು ಪ್ರಸ್ತಾಪಿಸಬಹುದು ಎಂದಿದ್ದಾರೆ.

ವರ್ಚುವಲ್‌ ಆಗಿ ನಡೆದ ಸರ್ವ ಪಕ್ಷ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಸರ್ವ ಪಕ್ಷ ಸಭೆಯಲ್ಲಿ 25 ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. ಸರ್ಕಾರದ ಪ್ರತಿನಿಧಿಯಾಗಿ ರಕ್ಷಣಾ ಸಚಿವರೂ ಆದ ಲೋಕಸಭೆಯ ಉಪ ನಾಯಕ ರಾಜನಾಥ್‌ ಸಿಂಗ್‌ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT