ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಅನಿರುದ್ಧ ಭೋಸ್ ಅವರೂ ಸದಸ್ಯರಾಗಿದ್ದ ಪೀಠವು, ಸರ್ಕಾರ ಈ ಕುರಿತು ಸಮಗ್ರ ಪ್ರಮಾಣಪತ್ರ ಸಲ್ಲಿಸಲಿದೆ ಎಂದು ಭಾವಿಸಿದ್ದೆವು ಎಂದೂ ಹೇಳಿತು. ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಈಗಾಗಲೇ ಸಲ್ಲಿಸಿದ ಪ್ರಮಾಣಪತ್ರದಲ್ಲಿಯೇ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿದೆ ಎಂದರು.