‘ಸರ್ಕಾರ ಪ್ರಮಾಣಪತ್ರ ಸಲ್ಲಿಸಲು ಬಯಸುವುದಿಲ್ಲ ಎಂದು ನೀವು ಪದೇ ಪದೇ ಹೇಳುತ್ತಿದ್ದೀರಿ. ದೇಶದ ಭದ್ರತಗೆ ಸಂಬಂಧಿಸಿದ ಯಾವುದೇ ವಿಷಯವನ್ನು ನಮ್ಮ ಮುಂದೆ ಇಡಬೇಕು ಎಂದು ನಾವು ಬಯಸುತ್ತಿಲ್ಲ. ಸಮಿತಿಯೊಂದನ್ನು ರಚಿಸಿ, ಅದು ಸಲ್ಲಿಸುವ ವರದಿಯನ್ನು ನೀಡುವುದಾಗಿ ನೀವು ಹೇಳುತ್ತಿದ್ದೀರಿ. ಈ ಎಲ್ಲಾ ವಿಷಯಗಳನ್ನು ಗಮನಿಸಿ ನಾವು ಮಧ್ಯಂತರ ಆದೇಶ ನೀಡಬೇಕಿದೆ’ ಎಂದು ಹೇಳಿದ ನ್ಯಾಯಪೀಠ, ‘ಮೆಹ್ತಾ ಅವರೇ, ನೀವು ಪೊದೆಯ ಸುತ್ತ ಹೊಡೆಯುತ್ತಿದ್ದೀರಿ, ಅದು ಇಲ್ಲಿ ಪ್ರಶ್ನೆಯಲ್ಲ’ ಎಂದು ಮಾರ್ಮಿಕವಾಗಿ ನುಡಿಯಿತು.