‘ಪ್ರಜ್ಞೆತಪ್ಪಿ ಬಿದ್ದವರ ಮನೆಯಿಂದ ನೀರು ಹಾಗೂ ಆಹಾರದ ಮಾದರಿಯನ್ನು ಸಂಗ್ರಹಿಸಲಾಗಿದ್ದು, ಜೊತೆಗೆ ಸ್ಥಳೀಯ ಹೋಟೆಲ್ ಹಾಗೂ ತರಕಾರಿ ಮಾರುಕಟ್ಟೆಯಿಂದಲೂ ಮಾದರಿ ಸಂಗ್ರಹಿಸಲಾಗಿದೆ. ಮಾಂಸ, ಹಾಲು, ಅಕ್ಕಿ ಹಾಗೂ ಭತ್ತದ ಬೆಳೆಗೆ ಬಳಸುವ ರಾಸಾಯನಿಕಗಳ ಮಾದರಿಯನ್ನೂ ಸಂಗ್ರಹಿಸಿ ಪರಿಶೀಲನೆಗೆ ರವಾನಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ಮುಖ್ಯ ಕಾರ್ಯದರ್ಶಿ ಆದಿತ್ಯನಾಥ್ ದಾಸ್ ಹಾಗೂ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಸಿಂಘಲ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಎಲೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.