<p class="title"><strong>ಮದುರೈ:</strong>ತಮಿಳುನಾಡಿನ ಪ್ರತಿಪಕ್ಷ ಎಐಎಡಿಎಂಕೆಯಲ್ಲಿ ಬಣ ರಾಜಕೀಯ ಮತ್ತೆ ಭುಗಿಲೆದ್ದಿದೆ. ತಮ್ಮ ವಿರೋಧಿ ಎಡಪ್ಪಾಡಿ ಕೆ. ಪಳನಿಸ್ವಾಮಿಬಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಎಐಎಡಿಎಂಕೆ ಮುಖಂಡ ಒ.ಪನ್ನೀರ್ ಸೆಲ್ವಂ ಅವರು, ಪಕ್ಷದ ಕಾರ್ಯಕರ್ತರು ತಮ್ಮ ಪರವಾಗಿದ್ದು, ಜನತೆ ಮತ್ತು ಪಕ್ಷದ ಕಾರ್ಯಕರ್ತರು ವಿರೋಧಿಗಳಿಗೆ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.</p>.<p>ತಮ್ಮ ತವರು ಜಿಲ್ಲೆ ಥೇಣಿಗೆ ತೆರಳುವ ಮಾರ್ಗ ಮಧ್ಯೆ ಭಾನುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಪಕ್ಷದಲ್ಲಿ ಇಂದಿನ ಸ್ಥಿತಿಗೆ ಕಾರಣವಾಗಿರುವವರಿಗೆ ಜನತೆ ಮತ್ತು ಪಕ್ಷದ ಕಾರ್ಯಕರ್ತರು ಸರಿಯಾದ ಪಾಠವನ್ನು ಕಲಿಸಲಿದ್ದಾರೆ. ಅವರನ್ನು ಜನತೆ ಶಿಕ್ಷಿಸಲಿದ್ದಾರೆ’ ಎಂದರು.</p>.<p><a href="https://www.prajavani.net/india-news/simranjit-singh-mann-of-shiromani-akali-dal-amritsar-wins-sangrur-lok-sabha-bypoll-949038.html" itemprop="url">ಸಿಎಂ ಭಗವಂತ ಮಾನ್ ಪ್ರತಿನಿಧಿಸುತ್ತಿದ್ದ ಸಂಗ್ರೂರ್ ಕ್ಷೇತ್ರದಲ್ಲಿ ಎಎಪಿಗೆ ಸೋಲು </a></p>.<p>ಜುಲೈ 11ರಂದು ಮತ್ತೆ ನಡೆಯಲಿರುವ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ಪಕ್ಷದ ಪರಮೋಚ್ಛ ನಾಯಕನನ್ನಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಎಐಎಡಿಎಂಕೆ ತಿಳಿಸಿದೆ. ಪಕ್ಷದ ಇಬ್ಬರು ಪ್ರಬಲ ನಾಯಕರಾದ ಇಪಿಎಸ್ ಮತ್ತು ಒಪಿಎಸ್ ಬಣಗಳು ಪರಸ್ಪರ ಕಿತ್ತಾಡುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮದುರೈ:</strong>ತಮಿಳುನಾಡಿನ ಪ್ರತಿಪಕ್ಷ ಎಐಎಡಿಎಂಕೆಯಲ್ಲಿ ಬಣ ರಾಜಕೀಯ ಮತ್ತೆ ಭುಗಿಲೆದ್ದಿದೆ. ತಮ್ಮ ವಿರೋಧಿ ಎಡಪ್ಪಾಡಿ ಕೆ. ಪಳನಿಸ್ವಾಮಿಬಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಎಐಎಡಿಎಂಕೆ ಮುಖಂಡ ಒ.ಪನ್ನೀರ್ ಸೆಲ್ವಂ ಅವರು, ಪಕ್ಷದ ಕಾರ್ಯಕರ್ತರು ತಮ್ಮ ಪರವಾಗಿದ್ದು, ಜನತೆ ಮತ್ತು ಪಕ್ಷದ ಕಾರ್ಯಕರ್ತರು ವಿರೋಧಿಗಳಿಗೆ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.</p>.<p>ತಮ್ಮ ತವರು ಜಿಲ್ಲೆ ಥೇಣಿಗೆ ತೆರಳುವ ಮಾರ್ಗ ಮಧ್ಯೆ ಭಾನುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಪಕ್ಷದಲ್ಲಿ ಇಂದಿನ ಸ್ಥಿತಿಗೆ ಕಾರಣವಾಗಿರುವವರಿಗೆ ಜನತೆ ಮತ್ತು ಪಕ್ಷದ ಕಾರ್ಯಕರ್ತರು ಸರಿಯಾದ ಪಾಠವನ್ನು ಕಲಿಸಲಿದ್ದಾರೆ. ಅವರನ್ನು ಜನತೆ ಶಿಕ್ಷಿಸಲಿದ್ದಾರೆ’ ಎಂದರು.</p>.<p><a href="https://www.prajavani.net/india-news/simranjit-singh-mann-of-shiromani-akali-dal-amritsar-wins-sangrur-lok-sabha-bypoll-949038.html" itemprop="url">ಸಿಎಂ ಭಗವಂತ ಮಾನ್ ಪ್ರತಿನಿಧಿಸುತ್ತಿದ್ದ ಸಂಗ್ರೂರ್ ಕ್ಷೇತ್ರದಲ್ಲಿ ಎಎಪಿಗೆ ಸೋಲು </a></p>.<p>ಜುಲೈ 11ರಂದು ಮತ್ತೆ ನಡೆಯಲಿರುವ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ಪಕ್ಷದ ಪರಮೋಚ್ಛ ನಾಯಕನನ್ನಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಎಐಎಡಿಎಂಕೆ ತಿಳಿಸಿದೆ. ಪಕ್ಷದ ಇಬ್ಬರು ಪ್ರಬಲ ನಾಯಕರಾದ ಇಪಿಎಸ್ ಮತ್ತು ಒಪಿಎಸ್ ಬಣಗಳು ಪರಸ್ಪರ ಕಿತ್ತಾಡುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>