ಮದುರೈ:ತಮಿಳುನಾಡಿನ ಪ್ರತಿಪಕ್ಷ ಎಐಎಡಿಎಂಕೆಯಲ್ಲಿ ಬಣ ರಾಜಕೀಯ ಮತ್ತೆ ಭುಗಿಲೆದ್ದಿದೆ. ತಮ್ಮ ವಿರೋಧಿ ಎಡಪ್ಪಾಡಿ ಕೆ. ಪಳನಿಸ್ವಾಮಿಬಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಎಐಎಡಿಎಂಕೆ ಮುಖಂಡ ಒ.ಪನ್ನೀರ್ ಸೆಲ್ವಂ ಅವರು, ಪಕ್ಷದ ಕಾರ್ಯಕರ್ತರು ತಮ್ಮ ಪರವಾಗಿದ್ದು, ಜನತೆ ಮತ್ತು ಪಕ್ಷದ ಕಾರ್ಯಕರ್ತರು ವಿರೋಧಿಗಳಿಗೆ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.