<p><strong>ತಿರುವನಂತಪುರ:</strong> ಕೇರಳದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸೆಪ್ಟೆಂಬರ್ 23ರಂದು ಕರೆ ನೀಡಿದ್ದ ಹರತಾಳದಲ್ಲಿ ವ್ಯಾಪಕ ಹಿಂಸಾಚಾರ ನಡೆದಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಹಿಂಸಾಚಾರ ಪೂರ್ವಯೋಜಿತ ಕೃತ್ಯವಾಗಿದ್ದು, ಅಪರಾಧಿಗಳನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ.</p>.<p>ಹಿರಿಯ ಪೊಲೀಸ್ ಅಧಿಕಾರಿಗಳ ಸಂಘದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಪಿಎಫ್ಐ ಹಿಂಸಾಚಾರವನ್ನು ಖಂಡಿಸಿದ್ದರಲ್ಲದೆ ಸಾರ್ವಜನಿಕ ಆಸ್ತಿ-ಪಾಸ್ತಿಗೆ ವ್ಯಾಪಕ ಹಾನಿಯುಂಟಾಗಿದೆ ಎಂದು ಹೇಳಿದರು.</p>.<p>ಪೂರ್ವಯೋಜಿತ ಹಿಂಸಾಚಾರದಿಂದಾಗಿ ರಾಜ್ಯಕ್ಕೆ ಭಾರಿ ನಷ್ಟ ಉಂಟಾಗಿದೆ. ಆದರೆ ಹಿಂಸಾಚಾರವನ್ನು ತಡೆಗಟ್ಟಲು ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/cbi-cracks-down-against-child-sex-abuse-material-raids-fifty-six-locations-across-country-974710.html" itemprop="url">ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಡಿಯೊ ಹಂಚಿಕೆ: 19 ರಾಜ್ಯಗಳಲ್ಲಿ ಸಿಬಿಐ ದಾಳಿ </a></p>.<p>ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಹಿಂಸಾಚಾರದಲ್ಲಿ ತೊಡಗಿದವರನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪು ಮಾಡಿದವರನ್ನು ಸುಮ್ಮನೇ ಬಿಡುವುದಿಲ್ಲ ಎಂದು ಹೇಳಿದರು.</p>.<p>ಹಿಂಸಾಚಾರಕ್ಕೆ ಸಂಬಂಧಿಸಿದಂತೆ 281 ಪ್ರಕರಣ ದಾಖಲಾಗಿದ್ದು, 1,013 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಇಲ್ಲಿ ಕೋಮುವಾದಿಗಳು ಭಯೋತ್ಪಾದಕ ವರ್ತನೆ ತೋರುತ್ತಿದ್ದಾರೆ. ಕೋಮುವಾದಿ-ಭಯೋತ್ಪಾದಕ ಅಂಶಗಳು ಎಂದಿಗೂ ನಮ್ಮ ರಾಷ್ಟ್ರವನ್ನು ಒಂದುಗೂಡಿಸಲು ಸಾಧ್ಯವಿಲ್ಲ. ಅವರಿಗೇ ಅವರದ್ದೇ ಆದ ಅಜೆಂಡಾ ಇದೆ. ಇಂತಹ ಪ್ರಚಾರವನ್ನು ಜಾತ್ಯತೀತ ಮನಸ್ಸುಗಳು ಹುರಿದುಂಬಿಸಬಾರದು ಎಂದು ಮುಖ್ಯಮಂತ್ರಿ ಪಿಣರಾಯಿ ಹೇಳಿದರು.</p>.<p>ಸೆಪ್ಟೆಂಬರ್ 22ರಂದು ಕಾನೂನುಬಾಹಿರ ಚಟುವಟಿಕೆ ಹಾಗೂ ಭಯೋತ್ಪಾದನಾ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಆರೋಪದಡಿ ದೇಶದ 11 ರಾಜ್ಯಗಳಲ್ಲಿ ದಾಳಿ ನಡೆಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ), ಪಿಎಫ್ಐ ಸಂಘಟನೆಯ 106 ಮಂದಿಯನ್ನು ಬಂಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸೆಪ್ಟೆಂಬರ್ 23ರಂದು ಕರೆ ನೀಡಿದ್ದ ಹರತಾಳದಲ್ಲಿ ವ್ಯಾಪಕ ಹಿಂಸಾಚಾರ ನಡೆದಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಹಿಂಸಾಚಾರ ಪೂರ್ವಯೋಜಿತ ಕೃತ್ಯವಾಗಿದ್ದು, ಅಪರಾಧಿಗಳನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ.</p>.<p>ಹಿರಿಯ ಪೊಲೀಸ್ ಅಧಿಕಾರಿಗಳ ಸಂಘದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಪಿಎಫ್ಐ ಹಿಂಸಾಚಾರವನ್ನು ಖಂಡಿಸಿದ್ದರಲ್ಲದೆ ಸಾರ್ವಜನಿಕ ಆಸ್ತಿ-ಪಾಸ್ತಿಗೆ ವ್ಯಾಪಕ ಹಾನಿಯುಂಟಾಗಿದೆ ಎಂದು ಹೇಳಿದರು.</p>.<p>ಪೂರ್ವಯೋಜಿತ ಹಿಂಸಾಚಾರದಿಂದಾಗಿ ರಾಜ್ಯಕ್ಕೆ ಭಾರಿ ನಷ್ಟ ಉಂಟಾಗಿದೆ. ಆದರೆ ಹಿಂಸಾಚಾರವನ್ನು ತಡೆಗಟ್ಟಲು ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/cbi-cracks-down-against-child-sex-abuse-material-raids-fifty-six-locations-across-country-974710.html" itemprop="url">ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಡಿಯೊ ಹಂಚಿಕೆ: 19 ರಾಜ್ಯಗಳಲ್ಲಿ ಸಿಬಿಐ ದಾಳಿ </a></p>.<p>ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಹಿಂಸಾಚಾರದಲ್ಲಿ ತೊಡಗಿದವರನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪು ಮಾಡಿದವರನ್ನು ಸುಮ್ಮನೇ ಬಿಡುವುದಿಲ್ಲ ಎಂದು ಹೇಳಿದರು.</p>.<p>ಹಿಂಸಾಚಾರಕ್ಕೆ ಸಂಬಂಧಿಸಿದಂತೆ 281 ಪ್ರಕರಣ ದಾಖಲಾಗಿದ್ದು, 1,013 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಇಲ್ಲಿ ಕೋಮುವಾದಿಗಳು ಭಯೋತ್ಪಾದಕ ವರ್ತನೆ ತೋರುತ್ತಿದ್ದಾರೆ. ಕೋಮುವಾದಿ-ಭಯೋತ್ಪಾದಕ ಅಂಶಗಳು ಎಂದಿಗೂ ನಮ್ಮ ರಾಷ್ಟ್ರವನ್ನು ಒಂದುಗೂಡಿಸಲು ಸಾಧ್ಯವಿಲ್ಲ. ಅವರಿಗೇ ಅವರದ್ದೇ ಆದ ಅಜೆಂಡಾ ಇದೆ. ಇಂತಹ ಪ್ರಚಾರವನ್ನು ಜಾತ್ಯತೀತ ಮನಸ್ಸುಗಳು ಹುರಿದುಂಬಿಸಬಾರದು ಎಂದು ಮುಖ್ಯಮಂತ್ರಿ ಪಿಣರಾಯಿ ಹೇಳಿದರು.</p>.<p>ಸೆಪ್ಟೆಂಬರ್ 22ರಂದು ಕಾನೂನುಬಾಹಿರ ಚಟುವಟಿಕೆ ಹಾಗೂ ಭಯೋತ್ಪಾದನಾ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಆರೋಪದಡಿ ದೇಶದ 11 ರಾಜ್ಯಗಳಲ್ಲಿ ದಾಳಿ ನಡೆಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ), ಪಿಎಫ್ಐ ಸಂಘಟನೆಯ 106 ಮಂದಿಯನ್ನು ಬಂಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>