<p class="title"><strong>ನವದೆಹಲಿ:</strong> ಸುಪ್ರೀಂ ಕೋರ್ಟಿನಲ್ಲಿ ಕಲಾಪ ಚಟುವಟಿಕೆಗಳು ಎಂದಿನಂತೆಯೇ ಮುಂದಿನ ವಾರದಿಂದ ಆರಂಭವಾಗುವ ಸಂಭವವಿದೆ. 15 ಪೀಠಗಳ ಪೈಕಿ ಕನಿಷ್ಠ 3ರಲ್ಲಿ ಹೆಚ್ಚುವರಿ ಸುರಕ್ಷತಾ ಕ್ರಮಗಳೊಂದಿಗೆ ಕಲಾಪ ಆರಂಭಿಸಬೇಕು ಎಂದು ಏಳು ನ್ಯಾಯಮೂರ್ತಿಗಳಿದ್ದ ಸುಪ್ರೀಂ ಕೋರ್ಟ್ ಸಮಿತಿ ಶಿಫಾರಸು ಮಾಡಿದೆ.</p>.<p class="title">ಕೋವಿಡ್-19ನಿಂದ ಉದ್ಘವಿಸಿರುವ ಪರಿಸ್ಥಿತಿಯಿಂದಾಗಿ ಸುಪ್ರೀಂ ಕೋರ್ಟ್ ಈ ವರ್ಷದ ಮಾರ್ಚ್ 25ರಿಂದಲೂ ವಿಡಿಯೊ ಕಾನ್ಫರೆನ್ಸ್ ಮೂಲಕ ಕಲಾಪ ನಡೆಸುತ್ತಿದೆ. ಲಾಕ್ ಡೌನ್ ನಿಯಮಗಳನ್ನು ಸಡಿಲಿಸಿದ ನಂತರವೂ ಇದೇ ಸ್ಥಿತಿ ಮುಂದುವರಿದಿದೆ.</p>.<p class="title">ಜುಲೈ ಕಡೆಯ ವಾರದಲ್ಲಿ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಏಳು ಸದಸ್ಯರ ಸಮಿತಿಯು ಎಂದಿನಂತೇ ಕಲಾಪ ಪುನರಾರಂಭಿಸುವ ಕುರಿತು ವಕೀಲರ ಸಂಘದ ಪದಾಧಿಕಾರಿಗಳ ಜೊತೆಗೂ ಚರ್ಚಿಸಿದ್ದು, ಎರಡು ವಾರದ ನಂತರ ತೀರ್ಮಾನ ಕೈಗೊಳ್ಳಬಹುದು ಎಂದು ಅಭಿಪ್ರಾಯಪಟ್ಟಿತ್ತು.</p>.<p class="title">ಸುಪ್ರಿಂ ಕೋರ್ಟಿನ ವಕೀಲರ ಸಂಘದ ಅಧ್ಯಕ್ಷ ಶಿವಾಜಿ ಎಂ.ಜಾಧವ್ ಅವರು, ನ್ಯಾಯಮೂರ್ತಿಗಳ ಸಮಿತಿಯು ಸಂಘದೊಂದಿಗೆಚರ್ಚಿಸಿದ್ದು, 2-3 ಪೀಠದಲ್ಲಿ ಕಲಾಪ ಪುನರಾರಂಭಿಸುವುದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.</p>.<p class="title">ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ಅವರಿಗೆ ಸಮಿತಿಯು ಶೀಘ್ರದಲ್ಲಿಯೇ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಸುಪ್ರೀಂ ಕೋರ್ಟಿನಲ್ಲಿ ಕಲಾಪ ಚಟುವಟಿಕೆಗಳು ಎಂದಿನಂತೆಯೇ ಮುಂದಿನ ವಾರದಿಂದ ಆರಂಭವಾಗುವ ಸಂಭವವಿದೆ. 15 ಪೀಠಗಳ ಪೈಕಿ ಕನಿಷ್ಠ 3ರಲ್ಲಿ ಹೆಚ್ಚುವರಿ ಸುರಕ್ಷತಾ ಕ್ರಮಗಳೊಂದಿಗೆ ಕಲಾಪ ಆರಂಭಿಸಬೇಕು ಎಂದು ಏಳು ನ್ಯಾಯಮೂರ್ತಿಗಳಿದ್ದ ಸುಪ್ರೀಂ ಕೋರ್ಟ್ ಸಮಿತಿ ಶಿಫಾರಸು ಮಾಡಿದೆ.</p>.<p class="title">ಕೋವಿಡ್-19ನಿಂದ ಉದ್ಘವಿಸಿರುವ ಪರಿಸ್ಥಿತಿಯಿಂದಾಗಿ ಸುಪ್ರೀಂ ಕೋರ್ಟ್ ಈ ವರ್ಷದ ಮಾರ್ಚ್ 25ರಿಂದಲೂ ವಿಡಿಯೊ ಕಾನ್ಫರೆನ್ಸ್ ಮೂಲಕ ಕಲಾಪ ನಡೆಸುತ್ತಿದೆ. ಲಾಕ್ ಡೌನ್ ನಿಯಮಗಳನ್ನು ಸಡಿಲಿಸಿದ ನಂತರವೂ ಇದೇ ಸ್ಥಿತಿ ಮುಂದುವರಿದಿದೆ.</p>.<p class="title">ಜುಲೈ ಕಡೆಯ ವಾರದಲ್ಲಿ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಏಳು ಸದಸ್ಯರ ಸಮಿತಿಯು ಎಂದಿನಂತೇ ಕಲಾಪ ಪುನರಾರಂಭಿಸುವ ಕುರಿತು ವಕೀಲರ ಸಂಘದ ಪದಾಧಿಕಾರಿಗಳ ಜೊತೆಗೂ ಚರ್ಚಿಸಿದ್ದು, ಎರಡು ವಾರದ ನಂತರ ತೀರ್ಮಾನ ಕೈಗೊಳ್ಳಬಹುದು ಎಂದು ಅಭಿಪ್ರಾಯಪಟ್ಟಿತ್ತು.</p>.<p class="title">ಸುಪ್ರಿಂ ಕೋರ್ಟಿನ ವಕೀಲರ ಸಂಘದ ಅಧ್ಯಕ್ಷ ಶಿವಾಜಿ ಎಂ.ಜಾಧವ್ ಅವರು, ನ್ಯಾಯಮೂರ್ತಿಗಳ ಸಮಿತಿಯು ಸಂಘದೊಂದಿಗೆಚರ್ಚಿಸಿದ್ದು, 2-3 ಪೀಠದಲ್ಲಿ ಕಲಾಪ ಪುನರಾರಂಭಿಸುವುದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.</p>.<p class="title">ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ಅವರಿಗೆ ಸಮಿತಿಯು ಶೀಘ್ರದಲ್ಲಿಯೇ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>