ಅರ್ಜಿದಾರರಾದ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು, ‘ಟ್ರಸ್ಟ್ ಮತ್ತು ಟ್ರಸ್ಟಿಗಳು, ದತ್ತಿಗಳು ಮತ್ತು ದತ್ತಿ ಸಂಸ್ಥೆಗಳು, ಧಾರ್ಮಿಕ ದತ್ತಿಗಳು ಮತ್ತು ಸಂಸ್ಥೆಗಳಿಗೆ ಏಕರೂಪದ ಕಾನೂನನ್ನು ಜಾರಿಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕು. ವಕ್ಫ್ ಆಸ್ತಿಗಳು ಯಾವುದೇ ವಿಶೇಷ ಹಕ್ಕುಗಳನ್ನು ಅನುಭವಿಸಲು ಸಾಧ್ಯವಿಲ್ಲ’ ಎಂದು ಪ್ರತಿಪಾದಿಸಿದರು.