ನವದೆಹಲಿ: ಕೋವಿಡ್–19ನಿಂದ ಸಾವಿಗೀಡಾದ ನ್ಯಾಯಾಂಗ ಸದಸ್ಯರ ಕುಟುಂಬಕ್ಕೆ ₹1 ಕೋಟಿ ಪರಿಹಾರವನ್ನು ನೀಡುಬೇಕು. ಜತೆಗೆ ಅವರನ್ನು ಮುಂಚೂಣಿ ಕಾರ್ಯಕರ್ತರು ಎಂದು ಘೋಷಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ಪ್ರತಿಕ್ರಿಯಿಸುವಂತೆ ದೆಹಲಿ ಸರ್ಕಾರಕ್ಕೆ ಸೂಚನೆ ನೀಡಿದೆ.