‘ಇಂಥ ಕ್ರಮದಿಂದ ಕಾಯ್ದೆ ಜಾರಿಯಾದಾಗ ಪ್ರಶ್ನಿಸುವುದು ತಪ್ಪಲಿದೆ. ಅಲ್ಲದೆ, ಪ್ರಶ್ನೆ ಮಾಡಿದ ಸಂದರ್ಭದಲ್ಲಿ ನೀವು ಏಕೆ ಮೊದಲೇ ಸರ್ಕಾರಕ್ಕೆ ಸಲಹೆ ನೀಡಲಿಲ್ಲ ಎಂದು ಅರ್ಜಿದಾರರಿಗೆ ಪ್ರಶ್ನಿಸಲು ಅವಕಾಶವಿದೆ. ಇಂಥ ಕ್ರಮಗಳು ಪರಿಣಾಮಕಾರಿಯಷ್ಟೇ ಅಲ್ಲ, ಪಾರದರ್ಶಕವೂ ಹೌದು. ಇದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ಸದೃಢಪಡಿಸಲಿದೆ’ ಎಂದು ಅರ್ಜಿದಾರರು ಸಲಹೆ ಮಾಡಿದ್ದಾರೆ.