ವಕೀಲ ಅಶ್ವನಿ ಕುಮಾರ್ ದುಬೆ ಅವರ ಮೂಲಕ ಸಲ್ಲಿಸಲಾಗಿರುವ ಪಿಐಎಲ್ನಲ್ಲಿ ‘ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ ಹೆಚ್ಚು ಪ್ರಕರಣಗಳು ಬಾಕಿ ಉಳಿದಿವೆ ಹಾಗೂ ದುರ್ಬಲವಾಗಿರುವ ಭ್ರಷ್ಟಾಚಾರ ನಿಗ್ರಹ ಕಾನೂನುಗಳಿಂದಾಗಿ ಭಾರತ ಭ್ರಷ್ಟಾಚಾರ ನಿಗ್ರಹದ ಶ್ರೇಯಾಂಕದಲ್ಲಿ ಹಿಂದೆ ಉಳಿದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ' ಎಂದು ತಿಳಿಸಲಾಗಿದೆ.