<p><strong>ಜಮ್ಮು ಮತ್ತು ಕಾಶ್ಮೀರ: </strong>‘ಭಾರಿ ಮಳೆಯ ಕಾರಣದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಪ್ರಸಿದ್ಧ ಮಾತಾ ವೈಷ್ಣೋದೇವಿ ದೇವಾಲಯವು, ಶನಿವಾರ ಬೆಳಿಗ್ಗೆಯಿಂದ ಪುನರಾರಂಭಗೊಂಡಿದೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಕಾತ್ರಾದ ಮೂಲ ಶಿಬಿರವಾದ ದಾರ್ಶನಿ ದೋಡಿಯಿಂದ, ಬೆಳಿಗ್ಗೆ 6.30ರ ಸುಮಾರಿಗೆ 1,500ಕ್ಕೂ ಹೆಚ್ಚು ಭಕ್ತರು ಹಳೆಯ ಮಾರ್ಗದಲ್ಲೇ ಯಾತ್ರೆಯ ಪ್ರಯಾಣದ ಪುನರಾರಂಭಕ್ಕೆ ಅನುಮತಿ ನೀಡಲಾಗಿದೆ’ ಎಂದು ಅವರು ಹೇಳಿದರು.</p>.<p>‘ಆದರೆ, ಯಾತ್ರೆಯ ಹೊಸ ಮಾರ್ಗ ಎಂದು ಕರೆಯಲ್ಪಡುವ ಹಿಮಕೋಟಿಯಲ್ಲಿ (ಬ್ಯಾಟರಿ ಕಾರ್) ತೆರವು ಕಾರ್ಯಾಚರಣೆ ನಡೆಯುತ್ತಿರುವುದರಿಂದ ಮಾರ್ಗವನ್ನು ಇನ್ನೂ ಮುಚ್ಚಲಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಹೆಲಿಕಾಪ್ಟರ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ’ ಎಂದರು.</p>.<p>ಭಾರಿ ಮಳೆಯ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.ಸಂಜೆ 6 ಗಂಟೆ ಸುಮಾರಿಗೆ ಧಾರಾಕಾರವಾಗಿ ಮಳೆ ಆರಂಭವಾಗಿ ಮಧ್ಯರಾತ್ರಿಯವರೆಗೂ ಸುರಿಯುವ ವೇಳೆ ಸಾವಿರಾರು ಭಕ್ತರು ದೇಗುಲದಲ್ಲಿ ಸೇರಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ಹಲವಾರು ವಿಡಿಯೊಗಳು ವೈಷ್ಣೋದೇವಿ ಮಾರ್ಗದಲ್ಲಿ ಉಂಟಾದ ಪ್ರವಾಹ ಸ್ಥಿತಿಯನ್ನು ತೋರಿಸುತ್ತಿದ್ದವು.</p>.<p>’ಮಳೆಯಿಂದಾಗಿ ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ’ ಎಂದು ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನ್ಶುಲ್ ಗರ್ಗ್ ಹೇಳಿದ್ದಾರೆ.</p>.<p>ಯಾವುದೇ ತುರ್ತು ಪರಿಸ್ಥಿತಿಗೆ ಸ್ಪಂದಿಸಲು ವಿಪತ್ತು ನಿರ್ವಹಣಾ ತಂಡಗಳು ಮತ್ತು ವೈದ್ಯಕೀಯ ಘಟಕಗಳಿಗೆ ಸೂಚನೆನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು ಮತ್ತು ಕಾಶ್ಮೀರ: </strong>‘ಭಾರಿ ಮಳೆಯ ಕಾರಣದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಪ್ರಸಿದ್ಧ ಮಾತಾ ವೈಷ್ಣೋದೇವಿ ದೇವಾಲಯವು, ಶನಿವಾರ ಬೆಳಿಗ್ಗೆಯಿಂದ ಪುನರಾರಂಭಗೊಂಡಿದೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಕಾತ್ರಾದ ಮೂಲ ಶಿಬಿರವಾದ ದಾರ್ಶನಿ ದೋಡಿಯಿಂದ, ಬೆಳಿಗ್ಗೆ 6.30ರ ಸುಮಾರಿಗೆ 1,500ಕ್ಕೂ ಹೆಚ್ಚು ಭಕ್ತರು ಹಳೆಯ ಮಾರ್ಗದಲ್ಲೇ ಯಾತ್ರೆಯ ಪ್ರಯಾಣದ ಪುನರಾರಂಭಕ್ಕೆ ಅನುಮತಿ ನೀಡಲಾಗಿದೆ’ ಎಂದು ಅವರು ಹೇಳಿದರು.</p>.<p>‘ಆದರೆ, ಯಾತ್ರೆಯ ಹೊಸ ಮಾರ್ಗ ಎಂದು ಕರೆಯಲ್ಪಡುವ ಹಿಮಕೋಟಿಯಲ್ಲಿ (ಬ್ಯಾಟರಿ ಕಾರ್) ತೆರವು ಕಾರ್ಯಾಚರಣೆ ನಡೆಯುತ್ತಿರುವುದರಿಂದ ಮಾರ್ಗವನ್ನು ಇನ್ನೂ ಮುಚ್ಚಲಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಹೆಲಿಕಾಪ್ಟರ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ’ ಎಂದರು.</p>.<p>ಭಾರಿ ಮಳೆಯ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.ಸಂಜೆ 6 ಗಂಟೆ ಸುಮಾರಿಗೆ ಧಾರಾಕಾರವಾಗಿ ಮಳೆ ಆರಂಭವಾಗಿ ಮಧ್ಯರಾತ್ರಿಯವರೆಗೂ ಸುರಿಯುವ ವೇಳೆ ಸಾವಿರಾರು ಭಕ್ತರು ದೇಗುಲದಲ್ಲಿ ಸೇರಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ಹಲವಾರು ವಿಡಿಯೊಗಳು ವೈಷ್ಣೋದೇವಿ ಮಾರ್ಗದಲ್ಲಿ ಉಂಟಾದ ಪ್ರವಾಹ ಸ್ಥಿತಿಯನ್ನು ತೋರಿಸುತ್ತಿದ್ದವು.</p>.<p>’ಮಳೆಯಿಂದಾಗಿ ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ’ ಎಂದು ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನ್ಶುಲ್ ಗರ್ಗ್ ಹೇಳಿದ್ದಾರೆ.</p>.<p>ಯಾವುದೇ ತುರ್ತು ಪರಿಸ್ಥಿತಿಗೆ ಸ್ಪಂದಿಸಲು ವಿಪತ್ತು ನಿರ್ವಹಣಾ ತಂಡಗಳು ಮತ್ತು ವೈದ್ಯಕೀಯ ಘಟಕಗಳಿಗೆ ಸೂಚನೆನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>